ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಗಣಿತ, ವಿಜ್ಞಾನ ಹಾಗೂ ತಂತ್ರಜ್ಞಾನ ವಿಷಯಗಳ ಹೆಚ್ಚು ತಿಳಿವಳಿಕೆಯ ಅಗತ್ಯವಿದೆ. ಆದರೆ, ಇವುಗಳ ಕಲಿಕೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಾಕಷ್ಟು ಹಿಂದುಳಿದಿದ್ದಾರೆ. ಅವರಲ್ಲಿನ ಆತಂಕವನ್ನು ದೂರ ಮಾಡಿ ಕಲಿಕಾ ಆಸಕ್ತಿಯನ್ನು ಬೆಳೆಸುವುದಕ್ಕಾಗಿಯೇ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.