<p><strong>ಗಾಂಧಿನಗರ:</strong> ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮುಂಜಾನೆ ವಿಶ್ವದ ಅತಿ ಎತ್ತರದ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು. ಗುಜರಾತ್ನ ನರ್ಮದಾ ಜಿಲ್ಲೆಯ ಕೆವಾಡಿಯ ಸಮೀಪ ಸ್ಥಾಪಿಸಿರುವ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಈ ಪ್ರತಿಮೆಯು 182 ಮೀಟರ್ ಎತ್ತರವಿದೆ. ಅ.31 ಸರ್ದಾರ್ ಪಟೇಲರ 143ನೇ ಹುಟ್ಟುಹಬ್ಬವೂಹೌದು.</p>.<p>ನರ್ಮದಾ ನದಿಯ ದಡದ ಮೇಲೆಉದ್ಘಾಟನಾ ಸಮಾರಂಭ ನಡೆಯಿತು. ಗಂಗೆ, ಯಮುನಾ ಮತ್ತು ಬ್ರಹ್ಮಪುತ್ರ ಸೇರಿ 30 ಪವಿತ್ರ ನದಿಗಳ ನೀರು ಸಂಗ್ರಹಿಸಿದ್ದ ಕಲಶದಿಂದ ಪ್ರತಿಮೆಗೆ ಮೋದಿ ಅಭಿಷೇಕ ಮಾಡಿದರು.</p>.<p>ಪ್ರತಿಮೆಯನ್ನು ದೇಶಕ್ಕೆ ಸಮರ್ಪಿಸಿದ ನಂತರ ಮಾತನಾಡಿ, ಭಾರತದ ಅಸ್ಮಿತೆಗಾಗಿ ಶ್ರಮಿಸಿದ ಮೇರು ವ್ಯಕ್ತಿತ್ವಕ್ಕೆ ಈ ಮೂಲಕ ಗೌರವ ಸಲ್ಲಿಸುತ್ತಿದ್ದೇವೆ. ಇದು ದೇಶದ ಇತಿಹಾಸದ ಸಾರ್ಥಕ ಕ್ಷಣ ಎಂದು ಬಣ್ಣಿಸಿದರು.</p>.<p>‘ನಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಈ ಕನಸು ಕಂಡಿದ್ದೆ. ದೇಶದ ಲಕ್ಷಾಂತರ ಜನರು ನನ್ನೊಡನೆ ಕೈಜೋಡಿಸಿದರು. ಅವರು ಬಳಸಿದ ಹಳೆದಯ ಕೃಷಿ ಉಪಕರಣಗಳಿಂದ ಕಬ್ಬಿಣ ಕೊಟ್ಟಿದ್ದರು. ಸರ್ದಾರ್ ಪಟೇಲರ ಪ್ರತಿಮೆ ನಿರ್ಮಾಣ ವಿಚಾರ ಸಾಮೂಹಿಕ ಚಳವಳಿಯೇ ಆಗಿತ್ತು’ ಎಂದು ನೆನಪಿಸಿಕೊಂಡರು.</p>.<p>ಪ್ರತಿಮೆ ನಿರ್ಮಾಣಕ್ಕೆ ಒಟ್ಟು ₹2389 ಕೋಟಿ ಖರ್ಚಾಗಿದೆ. 1947ರಲ್ಲಿದೇಶ ವಿಭಜನೆಯ ನಂತರ ದೇಶದಲ್ಲಿ ಏಕತೆ ಕಾಪಾಡಲು ಶ್ರಮಿಸಿದ ಮೊದಲ ಗೃಹ ಸಚಿವರಿಗೆ ಈ ಮೂಲಕ ಗೌರವ ಸಲ್ಲಿಸಲಾಗಿದೆ. ಮೋದಿ ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ ವಾಯುಪಡೆಯ ಮೂರು ವಿಮಾನಗಳು ಪ್ರತಿಮೆಯ ಸಮೀಪ ಹಾರಾಡಿ ಆಗಸದಲ್ಲಿ ತ್ರಿವರ್ಣದ ರಂಗು ಮೂಡಿಸಿದವು.</p>.<p>ವಡೋದರದಲ್ಲಿ ವಾಸವಿರುವ ಸರ್ದಾರ್ ಪಟೇಲ್ ವಂಶಸ್ಥ ಧಿರುಭಾಯ್, ‘ಇದು ಜೀವನದಲ್ಲಿ ಒಮ್ಮೆ ಮಾತ್ರ ಸಿಗುವ ಕ್ಷಣ’ ಎಂದು ಸರ್ಕಾರವನ್ನು ಅಭಿನಂದಿಸಿದರು.</p>.<p>ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಗೃಹ ಸಚಿವ ರಾಜನಾಥ್ ಸಿಂಗ್ ದೆಹಲಿಯಲ್ಲಿ ಸರ್ದಾರ್ ಪಟೇಲರಿಗೆ ಪುಷ್ಟನಮನ ಸಲ್ಲಿಸಿದರು. ಇಂಡಿಯಾ ಗೇಟ್ನಲ್ಲಿ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಜೊತೆಗೂಡಿ ರಾಜನಾಥ್ ಸಿಂಗ್ ಏಕತಾ ಓಟಕ್ಕೆ ಚಾಲನೆ ನೀಡಿದರು.</p>.<p>ಚೆನ್ನೈ, ಗುವಾಹತಿ ಮತ್ತು ಭುವನೇಶ್ವರ ಸೇರಿದಂತೆ ದೇಶದ ವಿವಿಧೆಡೆ ಏಕತಾ ಓಟ ನಡೆಯಿತು.ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ, ಧರ್ಮೇಂದ್ರ ಪ್ರಧಾನ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಂಧಿನಗರ:</strong> ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮುಂಜಾನೆ ವಿಶ್ವದ ಅತಿ ಎತ್ತರದ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು. ಗುಜರಾತ್ನ ನರ್ಮದಾ ಜಿಲ್ಲೆಯ ಕೆವಾಡಿಯ ಸಮೀಪ ಸ್ಥಾಪಿಸಿರುವ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಈ ಪ್ರತಿಮೆಯು 182 ಮೀಟರ್ ಎತ್ತರವಿದೆ. ಅ.31 ಸರ್ದಾರ್ ಪಟೇಲರ 143ನೇ ಹುಟ್ಟುಹಬ್ಬವೂಹೌದು.</p>.<p>ನರ್ಮದಾ ನದಿಯ ದಡದ ಮೇಲೆಉದ್ಘಾಟನಾ ಸಮಾರಂಭ ನಡೆಯಿತು. ಗಂಗೆ, ಯಮುನಾ ಮತ್ತು ಬ್ರಹ್ಮಪುತ್ರ ಸೇರಿ 30 ಪವಿತ್ರ ನದಿಗಳ ನೀರು ಸಂಗ್ರಹಿಸಿದ್ದ ಕಲಶದಿಂದ ಪ್ರತಿಮೆಗೆ ಮೋದಿ ಅಭಿಷೇಕ ಮಾಡಿದರು.</p>.<p>ಪ್ರತಿಮೆಯನ್ನು ದೇಶಕ್ಕೆ ಸಮರ್ಪಿಸಿದ ನಂತರ ಮಾತನಾಡಿ, ಭಾರತದ ಅಸ್ಮಿತೆಗಾಗಿ ಶ್ರಮಿಸಿದ ಮೇರು ವ್ಯಕ್ತಿತ್ವಕ್ಕೆ ಈ ಮೂಲಕ ಗೌರವ ಸಲ್ಲಿಸುತ್ತಿದ್ದೇವೆ. ಇದು ದೇಶದ ಇತಿಹಾಸದ ಸಾರ್ಥಕ ಕ್ಷಣ ಎಂದು ಬಣ್ಣಿಸಿದರು.</p>.<p>‘ನಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಈ ಕನಸು ಕಂಡಿದ್ದೆ. ದೇಶದ ಲಕ್ಷಾಂತರ ಜನರು ನನ್ನೊಡನೆ ಕೈಜೋಡಿಸಿದರು. ಅವರು ಬಳಸಿದ ಹಳೆದಯ ಕೃಷಿ ಉಪಕರಣಗಳಿಂದ ಕಬ್ಬಿಣ ಕೊಟ್ಟಿದ್ದರು. ಸರ್ದಾರ್ ಪಟೇಲರ ಪ್ರತಿಮೆ ನಿರ್ಮಾಣ ವಿಚಾರ ಸಾಮೂಹಿಕ ಚಳವಳಿಯೇ ಆಗಿತ್ತು’ ಎಂದು ನೆನಪಿಸಿಕೊಂಡರು.</p>.<p>ಪ್ರತಿಮೆ ನಿರ್ಮಾಣಕ್ಕೆ ಒಟ್ಟು ₹2389 ಕೋಟಿ ಖರ್ಚಾಗಿದೆ. 1947ರಲ್ಲಿದೇಶ ವಿಭಜನೆಯ ನಂತರ ದೇಶದಲ್ಲಿ ಏಕತೆ ಕಾಪಾಡಲು ಶ್ರಮಿಸಿದ ಮೊದಲ ಗೃಹ ಸಚಿವರಿಗೆ ಈ ಮೂಲಕ ಗೌರವ ಸಲ್ಲಿಸಲಾಗಿದೆ. ಮೋದಿ ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ ವಾಯುಪಡೆಯ ಮೂರು ವಿಮಾನಗಳು ಪ್ರತಿಮೆಯ ಸಮೀಪ ಹಾರಾಡಿ ಆಗಸದಲ್ಲಿ ತ್ರಿವರ್ಣದ ರಂಗು ಮೂಡಿಸಿದವು.</p>.<p>ವಡೋದರದಲ್ಲಿ ವಾಸವಿರುವ ಸರ್ದಾರ್ ಪಟೇಲ್ ವಂಶಸ್ಥ ಧಿರುಭಾಯ್, ‘ಇದು ಜೀವನದಲ್ಲಿ ಒಮ್ಮೆ ಮಾತ್ರ ಸಿಗುವ ಕ್ಷಣ’ ಎಂದು ಸರ್ಕಾರವನ್ನು ಅಭಿನಂದಿಸಿದರು.</p>.<p>ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಗೃಹ ಸಚಿವ ರಾಜನಾಥ್ ಸಿಂಗ್ ದೆಹಲಿಯಲ್ಲಿ ಸರ್ದಾರ್ ಪಟೇಲರಿಗೆ ಪುಷ್ಟನಮನ ಸಲ್ಲಿಸಿದರು. ಇಂಡಿಯಾ ಗೇಟ್ನಲ್ಲಿ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಜೊತೆಗೂಡಿ ರಾಜನಾಥ್ ಸಿಂಗ್ ಏಕತಾ ಓಟಕ್ಕೆ ಚಾಲನೆ ನೀಡಿದರು.</p>.<p>ಚೆನ್ನೈ, ಗುವಾಹತಿ ಮತ್ತು ಭುವನೇಶ್ವರ ಸೇರಿದಂತೆ ದೇಶದ ವಿವಿಧೆಡೆ ಏಕತಾ ಓಟ ನಡೆಯಿತು.ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ, ಧರ್ಮೇಂದ್ರ ಪ್ರಧಾನ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>