‘ಕಳೆದ 15 ದಿನಗಳಿಂದ ಅನಿಯಂತ್ರಿತವಾಗಿಅನಿಲ ಸೋರಿಕೆ ಆಗುತ್ತಿದೆ. ಇದರಿಂದ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಘಟನಾ ಸ್ಥಳದ 1 ಕಿ.ಮೀ ವ್ಯಾಪ್ತಿಯಲ್ಲಿರುವ ಮನೆಗಳು, ವಾಹನಗಳು, ಸಣ್ಣ ಉದ್ಯಾನಗಳು, ಅರಣ್ಯ ಪ್ರದೇಶವು ಸುಟ್ಟು ಬೂದಿಯಾಗಿವೆ. ಬೆಂಕಿ ಈವರೆಗೂ ನಿಯಂತ್ರಣಕ್ಕೆ ಬಾರದ ಕಾರಣ, ಹಾನಿಯ ಅಂದಾಜು ಮಾಡಲು ಸಾಧ್ಯವಾಗಿಲ್ಲ’ ಎಂದು ಒಐಎಲ್ ಅಧಿಕಾರಿಗಳು ತಿಳಿಸಿದ್ದಾರೆ.