<p><strong>ಠಾಕೂರ್ನಗರ</strong>:ಬಾಂಗ್ಲಾದೇಶ, ಅಫ್ಗಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ‘ಪೌರತ್ವ (ತಿದ್ದುಪಡಿ) ಮಸೂದೆಯನ್ನು ಸಂಸತ್ತಿನಲ್ಲಿ ಬೆಂಬಲಿಸುವಂತೆ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರಲ್ಲಿ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.</p>.<p>24 ಉತ್ತರ ಪರಗಣ ಜಿಲ್ಲೆ ಠಾಕೂರ್ನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ದೇಶದಿಂದ ಯಾರು ಹೊರಗೆ ಹೋಗಿದ್ದಾರೋ ಅವರು ಮತ್ತೆ ದೇಶಕ್ಕೆ ಮರಳಲು ಉತ್ಸುಕರಾಗಿದ್ದಾರೆ, ಅವರು ದೇಶಕ್ಕೆ ಬರಬೇಕಾದರೆ ‘ಪೌರತ್ವ (ತಿದ್ದುಪಡಿ) ಮಸೂದೆ’ ಜಾರಿಯಾಗಬೇಕು. ಈ ಮಸೂದೆಗೆ ಮಮತಾ ಬ್ಯಾನರ್ಜಿ ಬೆಂಬಲ ನೀಡಬೇಕು ಎಂದರು.</p>.<p>ಈಗಾಗಲೇ ಈ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗಿದೆ. ರಾಜಸಭೆಯಲ್ಲಿ ಈ ಮಸೂದೆ ಅಂಗೀಕಾರವಾಗಬೇಕಾದರೆ ಟಿಎಂಸಿ ಬೆಂಗಲ ಅಗತ್ಯ. ಮುಂಬರುವ ಬಜೆಟ್ ಮೇಲಿನ ಚರ್ಚೆಯ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗದಿದ್ದರೆ ಅದು ರದ್ದಾಗಲಿದೆ. ಯಾಕೆಂದರೆ ಮಾರ್ಚ್ ಅಂತ್ಯಕ್ಕೆ ಈ ಲೋಕಸಭೆಯ ಅವಧಿ ಮುಕ್ತಾಯವಾಗಲಿದೆ. ಈ ಮಸೂದೆ ತಾರತಮ್ಯದಿಂದ ಕೂಡಿದೆ ಎಂದು ಆರೋಪಿಸಿರುವ ಟಿಎಂಸಿ ಮಸೂದೆ ಜಾರಿಗೆ ವಿರೋಧ ವ್ಯಕ್ತಪಡಿಸಿದೆ.</p>.<p><br /><em><strong>(ಸಮಾವೇಶದಲ್ಲಿ ನೆರೆದಿದ್ದ ಜನತೆ)</strong></em></p>.<p>24 ಉತ್ತರ ಪರಗಣ ಜಿಲ್ಲೆಯಲ್ಲಿ ಮತುವಾ ಸಮುದಾಯದವರು ಬಹು ಸಂಖ್ಯಾತರಾಗಿದ್ದಾರೆ. ಇವರ ಸಂಖ್ಯೆ ಸುಮಾರು 30 ಲಕ್ಷಕ್ಕೂ ಹೆಚ್ಚು. ಇದೇ ಸಮುದಾಯದ ಮಮತಾ ಠಾಕೂರ್ ಟಿಎಂಸಿಯಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಮತುವಾ ಮಹಾಸಭಾದ ಸಹಯೋಗದೊಂದಿಗೆ ಬಿಜೆಪಿ ಈ ಸಮಾವೇಷವನ್ನು ಆಯೋಜಿಸಿದೆ.</p>.<p>ಶುಕ್ರವಾರ ಬಜೆಟ್ ಮಂಡಿಸಿದರ ಬಗ್ಗೆ ಮಾತನಾಡಿದ ಮೋದಿ ಸಾಮಾನ್ಯ ವರ್ಗದವರಿಗೆ ತೆರಿಗೆ ಹೊರೆ ಇಳಿಸಲಾಗಿದೆ. ಕೂಲಿ ಕಾರ್ಮಿಕರಿಗೆ ಪಿಂಚಣಿ ಹಾಗೂ ರೈತರಿಗೆ ವಾರ್ಷಿಕ ಆರು ಸಾವಿರ ರೂಪಾಯಿಗಳ ಹಣಕಾಸು ನೆರವು ನೀಡಲಾಗುವುದು ಎಂದರು.</p>.<p>ಮಧ್ಯಪ್ರದೇಶದಲ್ಲಿ ರೈತರೊಬ್ಬರ 13 ರೂಪಾಯಿ ಸಾಲ ಮನ್ನಾ ಮಾಡಲಾಗಿದೆ, ರಾಜಸ್ಥಾನದಲ್ಲಿ ರೈತರ ಸಾಲ ಮನ್ನಾ ಮಾಡಲು ಆ ಸರ್ಕಾರ ಹಿಂದೇಟು ಹಾಕುತ್ತಿದೆ. ಕರ್ನಾಟಕದಲ್ಲಿ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸಲಾಗುತ್ತಿದೆ. ಇವೆಲ್ಲ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಎಂದು ಮೋದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಕೂರ್ನಗರ</strong>:ಬಾಂಗ್ಲಾದೇಶ, ಅಫ್ಗಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ‘ಪೌರತ್ವ (ತಿದ್ದುಪಡಿ) ಮಸೂದೆಯನ್ನು ಸಂಸತ್ತಿನಲ್ಲಿ ಬೆಂಬಲಿಸುವಂತೆ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರಲ್ಲಿ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.</p>.<p>24 ಉತ್ತರ ಪರಗಣ ಜಿಲ್ಲೆ ಠಾಕೂರ್ನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ದೇಶದಿಂದ ಯಾರು ಹೊರಗೆ ಹೋಗಿದ್ದಾರೋ ಅವರು ಮತ್ತೆ ದೇಶಕ್ಕೆ ಮರಳಲು ಉತ್ಸುಕರಾಗಿದ್ದಾರೆ, ಅವರು ದೇಶಕ್ಕೆ ಬರಬೇಕಾದರೆ ‘ಪೌರತ್ವ (ತಿದ್ದುಪಡಿ) ಮಸೂದೆ’ ಜಾರಿಯಾಗಬೇಕು. ಈ ಮಸೂದೆಗೆ ಮಮತಾ ಬ್ಯಾನರ್ಜಿ ಬೆಂಬಲ ನೀಡಬೇಕು ಎಂದರು.</p>.<p>ಈಗಾಗಲೇ ಈ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗಿದೆ. ರಾಜಸಭೆಯಲ್ಲಿ ಈ ಮಸೂದೆ ಅಂಗೀಕಾರವಾಗಬೇಕಾದರೆ ಟಿಎಂಸಿ ಬೆಂಗಲ ಅಗತ್ಯ. ಮುಂಬರುವ ಬಜೆಟ್ ಮೇಲಿನ ಚರ್ಚೆಯ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗದಿದ್ದರೆ ಅದು ರದ್ದಾಗಲಿದೆ. ಯಾಕೆಂದರೆ ಮಾರ್ಚ್ ಅಂತ್ಯಕ್ಕೆ ಈ ಲೋಕಸಭೆಯ ಅವಧಿ ಮುಕ್ತಾಯವಾಗಲಿದೆ. ಈ ಮಸೂದೆ ತಾರತಮ್ಯದಿಂದ ಕೂಡಿದೆ ಎಂದು ಆರೋಪಿಸಿರುವ ಟಿಎಂಸಿ ಮಸೂದೆ ಜಾರಿಗೆ ವಿರೋಧ ವ್ಯಕ್ತಪಡಿಸಿದೆ.</p>.<p><br /><em><strong>(ಸಮಾವೇಶದಲ್ಲಿ ನೆರೆದಿದ್ದ ಜನತೆ)</strong></em></p>.<p>24 ಉತ್ತರ ಪರಗಣ ಜಿಲ್ಲೆಯಲ್ಲಿ ಮತುವಾ ಸಮುದಾಯದವರು ಬಹು ಸಂಖ್ಯಾತರಾಗಿದ್ದಾರೆ. ಇವರ ಸಂಖ್ಯೆ ಸುಮಾರು 30 ಲಕ್ಷಕ್ಕೂ ಹೆಚ್ಚು. ಇದೇ ಸಮುದಾಯದ ಮಮತಾ ಠಾಕೂರ್ ಟಿಎಂಸಿಯಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಮತುವಾ ಮಹಾಸಭಾದ ಸಹಯೋಗದೊಂದಿಗೆ ಬಿಜೆಪಿ ಈ ಸಮಾವೇಷವನ್ನು ಆಯೋಜಿಸಿದೆ.</p>.<p>ಶುಕ್ರವಾರ ಬಜೆಟ್ ಮಂಡಿಸಿದರ ಬಗ್ಗೆ ಮಾತನಾಡಿದ ಮೋದಿ ಸಾಮಾನ್ಯ ವರ್ಗದವರಿಗೆ ತೆರಿಗೆ ಹೊರೆ ಇಳಿಸಲಾಗಿದೆ. ಕೂಲಿ ಕಾರ್ಮಿಕರಿಗೆ ಪಿಂಚಣಿ ಹಾಗೂ ರೈತರಿಗೆ ವಾರ್ಷಿಕ ಆರು ಸಾವಿರ ರೂಪಾಯಿಗಳ ಹಣಕಾಸು ನೆರವು ನೀಡಲಾಗುವುದು ಎಂದರು.</p>.<p>ಮಧ್ಯಪ್ರದೇಶದಲ್ಲಿ ರೈತರೊಬ್ಬರ 13 ರೂಪಾಯಿ ಸಾಲ ಮನ್ನಾ ಮಾಡಲಾಗಿದೆ, ರಾಜಸ್ಥಾನದಲ್ಲಿ ರೈತರ ಸಾಲ ಮನ್ನಾ ಮಾಡಲು ಆ ಸರ್ಕಾರ ಹಿಂದೇಟು ಹಾಕುತ್ತಿದೆ. ಕರ್ನಾಟಕದಲ್ಲಿ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸಲಾಗುತ್ತಿದೆ. ಇವೆಲ್ಲ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಎಂದು ಮೋದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>