ನವದೆಹಲಿ: ಭಾರತ–ಚೀನಾ ವಾಸ್ತವ ಗಡಿ ರೇಖೆಯಲ್ಲಿನ ಸಂಘರ್ಷದಲ್ಲಿ ಭಾರತೀಯ ಸೇನೆಯ ತುಕಡಿಯೊಂದರ ಕಮಾಂಡಿಂಗ್ ಅಧಿಕಾರಿ ಸೇರಿ ಇಪ್ಪತ್ತು ಯೋಧರು ಹುತಾತ್ಮರಾಗಿರುವ ಮಾಹಿತಿ ಖಚಿತವಾಗುತ್ತಿದಂತೆ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ತಡ ರಾತ್ರಿ ಉನ್ನತಮಟ್ಟದ ಸಭೆ ನಡೆದಿದೆ.
ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಭಾರತೀಯ ಸೇನೆಯ ಮುಖ್ಯಸ್ಥ ಎಂಎಂ ನರವಣೆ ಅವರು ಮಹತ್ವದ ಸಭೆ ನಡೆಸಿದ್ದಾರೆ.
ಸಭೆ ಮಂಗಳವಾರ ರಾತ್ರಿ 10 ಗಂಟೆಯಲ್ಲಿ ನಡೆದಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಮುಂದಿನ ಬೆಳವಣಿಗೆಿದೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎನ್ನಲಾಗಿದೆ.
ಎಎನ್ಐ ಸುದ್ದಿ ಸಂಸ್ಥೆ ಚೀನಾದ 43 ಯೋಧರು ಮೃತಪಟ್ಟಿದ್ದಾರೆ ಅಥವಾ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ಮಾಡಿದೆ. ಈ ಬಗ್ಗೆಯೂ ಸಭೆಯಲ್ಲಿ ಯಚರ್ಚೆ ಮಾಡಲಾಗಿದೆ. ಚೀನಾದ 35 ಸೈನಿಕರು ಮೃತಪಟ್ಟಿದ್ದಾರೆ ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ.