ದೇಶವನ್ನಾವರಿಸಿರುವ ಕೊರೊನಾ ವೈರಸ್ ಭೀತಿಯ ಪ್ರಮುಖ ವಿಚಾರಗಳ ಕುರಿತು ಮೋದಿ ಈ ಭಾಷಣದಲ್ಲಿ ಮಾತನಾಡಲಿದ್ದಾರೆ.
ದೇಶದಲ್ಲಿ 490ಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಮೋದಿ ಈ ಭಾಷಣಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಸದ್ಯ ದೇಶದಲ್ಲಿ ಕೊರೊನಾ ವೈರಸ್ ಮಹಾಮಾರಿಯಿಂದಾಗಿ ಈ ವರೆಗೆ 9 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಕರ್ನಾಟಕದವರೂ ಒಬ್ಬರು.
ಕಳೆದ ಗುರುವಾರವೂ ದೇಶವನ್ನುದ್ದೇಶಿ ಮಾತನಾಡಿದ್ದ ನರೇಂದ್ರ ಮೋದಿ ಅವರು, ಕೊರೊನಾ ವೈರಸ್ ವ್ಯಾಪಕಗೊಳ್ಳುವ ಸರಪಳಿಯನ್ನು ತುಂಡರಿಸಲು ದೇಶವ್ಯಾಪಿ ಜನತಾ ಕರ್ಫ್ಯೂ ಆಚರಿಸುವಂತೆ ಮನವಿ ಮಾಡಿದ್ದರು. ಅದರಂತೆ ಕಳೆದ ಭಾನುವಾರ ಇಡೀ ದೇಶಸ್ತಬ್ಧವಾಗಿತ್ತು.