<p><strong>ನವದೆಹಲಿ: </strong>ಲಾಕ್ಡೌನ್ನಿಂದಾಗಿ ತವರಿಗೆ ಮರಳಿ, ಸಂಕಷ್ಟಕ್ಕೆ ಒಳಗಾಗಿರುವ ವಲಸೆ ಕಾರ್ಮಿಕರಿಗೆ ಉದ್ಯೋಗ ನೀಡುವ ‘ಬಡವರ ಕಲ್ಯಾಣ ಉದ್ಯೋಗ ಅಭಿಯಾನ’ ಎಂಬ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20ರಂದು ಚಾಲನೆ ನೀಡುವರು.</p>.<p>ಬಿಹಾರದ ಖಗರಿಯಾ ಜಿಲ್ಲೆಯ ಬೆಲ್ದೌರ್ ತಾಲ್ಲೂಕಿನ ತೆಲಿಹಾರ್ ಗ್ರಾಮದಲ್ಲಿ ಈ ಯೋಜನೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ಚಾಲನೆ ನೀಡುವರು ಎಂದು ಮೂಲಗಳು ಗುರುವಾರ ತಿಳಿಸಿವೆ.</p>.<p>ಬಿಹಾರ ಮುಖ್ಯಮಂತ್ರಿ ನಿತೀಶ್ಕುಮಾರ್ ಹಾಗೂ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಅವರಲ್ಲದೇ, ಐದು ರಾಜ್ಯಗಳ ಮುಖ್ಯಮಂತ್ರಿಗಳು, ಕೆಲವು ಕೇಂದ್ರ ಸಚಿವರು ಸಹ ಈ ಆನ್ಲೈನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.</p>.<p><strong>ಯೋಜನೆ ವೈಶಿಷ್ಟ್ಯ</strong>: ಆರು ರಾಜ್ಯಗಳ 116 ಜಿಲ್ಲೆಗಳ ‘ತವರಿಗೆ ಮರಳಿದ’ 25 ಸಾವಿರ ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು ಈ ಯೋಜನೆಯ ಗುರಿ. ಈ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಯ ಅವಧಿ 125 ದಿನ ಇರಲಿದೆ. ಕಾರ್ಮಿಕರು ಹೊಂದಿರುವ ಕೌಶಲ ಆಧಾರದ ಮೇಲೆ 25 ಬಗೆಯ ಉದ್ಯೋಗ ಒದಗಿಸಲಾಗುತ್ತಿದ್ದು, ಈ ಯೋಜನೆಗೆ ₹ 50,000 ಕೋಟಿ ತೆಗೆದಿರಿಸಲಾಗಿದೆ.</p>.<p>ರೈಲ್ವೆ, ಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸೇರಿದಂತೆ ಒಟ್ಟು 12 ಸಚಿವಾಲಯಗಳ ಸಮನ್ವಯದೊಂದಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಲಾಕ್ಡೌನ್ನಿಂದಾಗಿ ತವರಿಗೆ ಮರಳಿ, ಸಂಕಷ್ಟಕ್ಕೆ ಒಳಗಾಗಿರುವ ವಲಸೆ ಕಾರ್ಮಿಕರಿಗೆ ಉದ್ಯೋಗ ನೀಡುವ ‘ಬಡವರ ಕಲ್ಯಾಣ ಉದ್ಯೋಗ ಅಭಿಯಾನ’ ಎಂಬ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20ರಂದು ಚಾಲನೆ ನೀಡುವರು.</p>.<p>ಬಿಹಾರದ ಖಗರಿಯಾ ಜಿಲ್ಲೆಯ ಬೆಲ್ದೌರ್ ತಾಲ್ಲೂಕಿನ ತೆಲಿಹಾರ್ ಗ್ರಾಮದಲ್ಲಿ ಈ ಯೋಜನೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ಚಾಲನೆ ನೀಡುವರು ಎಂದು ಮೂಲಗಳು ಗುರುವಾರ ತಿಳಿಸಿವೆ.</p>.<p>ಬಿಹಾರ ಮುಖ್ಯಮಂತ್ರಿ ನಿತೀಶ್ಕುಮಾರ್ ಹಾಗೂ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಅವರಲ್ಲದೇ, ಐದು ರಾಜ್ಯಗಳ ಮುಖ್ಯಮಂತ್ರಿಗಳು, ಕೆಲವು ಕೇಂದ್ರ ಸಚಿವರು ಸಹ ಈ ಆನ್ಲೈನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.</p>.<p><strong>ಯೋಜನೆ ವೈಶಿಷ್ಟ್ಯ</strong>: ಆರು ರಾಜ್ಯಗಳ 116 ಜಿಲ್ಲೆಗಳ ‘ತವರಿಗೆ ಮರಳಿದ’ 25 ಸಾವಿರ ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು ಈ ಯೋಜನೆಯ ಗುರಿ. ಈ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಯ ಅವಧಿ 125 ದಿನ ಇರಲಿದೆ. ಕಾರ್ಮಿಕರು ಹೊಂದಿರುವ ಕೌಶಲ ಆಧಾರದ ಮೇಲೆ 25 ಬಗೆಯ ಉದ್ಯೋಗ ಒದಗಿಸಲಾಗುತ್ತಿದ್ದು, ಈ ಯೋಜನೆಗೆ ₹ 50,000 ಕೋಟಿ ತೆಗೆದಿರಿಸಲಾಗಿದೆ.</p>.<p>ರೈಲ್ವೆ, ಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸೇರಿದಂತೆ ಒಟ್ಟು 12 ಸಚಿವಾಲಯಗಳ ಸಮನ್ವಯದೊಂದಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>