<p><strong>ನವದೆಹಲಿ:</strong> ಚೀನಾದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್ 800ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ಅಧ್ಯಕ್ಷರಿಗೆ ಪತ್ರ ಬರೆದು ಕೊರೊನಾ ವೈರಸ್ ವಿರುದ್ಧ ಹೋರಾಡಲು ಭಾರತ ನೆರವು ನೀಡುತ್ತದೆ ಎಂದು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.</p>.<p>ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ಅವರಿಗೆ ಬರೆದ ಪತ್ರದಲ್ಲಿ, ಚೀನಾದಲ್ಲಿ ಈಗ ಎದುರಾಗಿರುವ ಪರಿಸ್ಥಿತಿಯನ್ನ ಎದುರಿಸಲು ಭಾರತ ನೆರವು ನೀಡುತ್ತದೆ. ಏಕಾಏಕಿ ಸಂಭವಿಸಿದ ಕೊರೊನಾ ವೈರಸ್ನ ದುರದೃಷ್ಟಕರ ಪ್ರಾಣಹಾನಿಗೆ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.</p>.<p>ಇದರೊಂದಿಗೆ ಕೊರೊನಾ ವೈರಸ್ನ ತೀವ್ರ ಹೊಡೆತಕ್ಕೆ ಸಿಲುಕಿರುವ ಹುಬೆ ಪ್ರಾಂತ್ಯದಿಂದ ಈ ತಿಂಗಳ ಆರಂಭದಲ್ಲಿ ಭಾರತೀಯರನ್ನು ಸ್ಥಳಾಂತರಿಸಲು ನೆರವು ನೀಡಿದ ಚೀನಾ ಸರ್ಕಾರದ ಕಾರ್ಯಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/international/corona-death-toll-surpasses-sears-704045.html" itemprop="url">ಕೊರೊನಾವೈರಸ್: ಮೃತರ ಸಂಖ್ಯೆ 811ಕ್ಕೆ ಏರಿಕೆ </a></p>.<p>ಕರೊನಾ ವೈರಸ್ ಪತ್ತೆಗಾಗಿ ಭಾರತವು ಹಲವಾರು ವಿಮಾನ ನಿಲ್ದಾಣಗಳು, ಬಂದರುಗಳು ಮತ್ತು ನೇಪಾಳದ ಗಡಿ ಚೆಕ್ ಪಾಯಿಂಟ್ಗಳಲ್ಲಿ ಬೃಹತ್ ಸ್ಕ್ರೀನಿಂಗ್ ಸೌಲಭ್ಯಗಳನ್ನು ಇಟ್ಟಿದೆ. ಇನ್ನು ಕೇರಳದಲ್ಲಿ ಮೂವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ರಾಜ್ಯದಲ್ಲಿ ಹಲವು ಕುಟುಂಬಗಳನ್ನು ನಿರ್ಬಂಧಿಸಲಾಗಿದ್ದು, ಪ್ರತಿದಿನವೂ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಚೀನಾದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್ 800ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ಅಧ್ಯಕ್ಷರಿಗೆ ಪತ್ರ ಬರೆದು ಕೊರೊನಾ ವೈರಸ್ ವಿರುದ್ಧ ಹೋರಾಡಲು ಭಾರತ ನೆರವು ನೀಡುತ್ತದೆ ಎಂದು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.</p>.<p>ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ಅವರಿಗೆ ಬರೆದ ಪತ್ರದಲ್ಲಿ, ಚೀನಾದಲ್ಲಿ ಈಗ ಎದುರಾಗಿರುವ ಪರಿಸ್ಥಿತಿಯನ್ನ ಎದುರಿಸಲು ಭಾರತ ನೆರವು ನೀಡುತ್ತದೆ. ಏಕಾಏಕಿ ಸಂಭವಿಸಿದ ಕೊರೊನಾ ವೈರಸ್ನ ದುರದೃಷ್ಟಕರ ಪ್ರಾಣಹಾನಿಗೆ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.</p>.<p>ಇದರೊಂದಿಗೆ ಕೊರೊನಾ ವೈರಸ್ನ ತೀವ್ರ ಹೊಡೆತಕ್ಕೆ ಸಿಲುಕಿರುವ ಹುಬೆ ಪ್ರಾಂತ್ಯದಿಂದ ಈ ತಿಂಗಳ ಆರಂಭದಲ್ಲಿ ಭಾರತೀಯರನ್ನು ಸ್ಥಳಾಂತರಿಸಲು ನೆರವು ನೀಡಿದ ಚೀನಾ ಸರ್ಕಾರದ ಕಾರ್ಯಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/international/corona-death-toll-surpasses-sears-704045.html" itemprop="url">ಕೊರೊನಾವೈರಸ್: ಮೃತರ ಸಂಖ್ಯೆ 811ಕ್ಕೆ ಏರಿಕೆ </a></p>.<p>ಕರೊನಾ ವೈರಸ್ ಪತ್ತೆಗಾಗಿ ಭಾರತವು ಹಲವಾರು ವಿಮಾನ ನಿಲ್ದಾಣಗಳು, ಬಂದರುಗಳು ಮತ್ತು ನೇಪಾಳದ ಗಡಿ ಚೆಕ್ ಪಾಯಿಂಟ್ಗಳಲ್ಲಿ ಬೃಹತ್ ಸ್ಕ್ರೀನಿಂಗ್ ಸೌಲಭ್ಯಗಳನ್ನು ಇಟ್ಟಿದೆ. ಇನ್ನು ಕೇರಳದಲ್ಲಿ ಮೂವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ರಾಜ್ಯದಲ್ಲಿ ಹಲವು ಕುಟುಂಬಗಳನ್ನು ನಿರ್ಬಂಧಿಸಲಾಗಿದ್ದು, ಪ್ರತಿದಿನವೂ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>