ಕರೊನಾ ವೈರಸ್ ಪತ್ತೆಗಾಗಿ ಭಾರತವು ಹಲವಾರು ವಿಮಾನ ನಿಲ್ದಾಣಗಳು, ಬಂದರುಗಳು ಮತ್ತು ನೇಪಾಳದ ಗಡಿ ಚೆಕ್ ಪಾಯಿಂಟ್ಗಳಲ್ಲಿ ಬೃಹತ್ ಸ್ಕ್ರೀನಿಂಗ್ ಸೌಲಭ್ಯಗಳನ್ನು ಇಟ್ಟಿದೆ. ಇನ್ನು ಕೇರಳದಲ್ಲಿ ಮೂವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ರಾಜ್ಯದಲ್ಲಿ ಹಲವು ಕುಟುಂಬಗಳನ್ನು ನಿರ್ಬಂಧಿಸಲಾಗಿದ್ದು, ಪ್ರತಿದಿನವೂ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸಲಾಗುತ್ತಿದೆ.