‘ಶಿವಸೈನಿಕನನ್ನು (ಶಿವಸೇನಾ ಕಾರ್ಯಕರ್ತ) ಮಹಾರಾಷ್ಟ್ರದ ಮುಖ್ಯಮಂತ್ರಿ ಮಾಡುತ್ತೇನೆ ಎಂದು ನನ್ನ ತಂದೆ, ಬಾಳಾ ಠಾಕ್ರೆ ಅವರಿಗೆ ನಾನು ಮಾತು ಕೊಟ್ಟಿದ್ದೆ. ಅದನ್ನು ಈಡೇರಿಸಲು ಬದ್ಧನಾಗಿದ್ದೇನೆ’ ಎಂದು ಶನಿವಾರವಷ್ಟೇ ಉದ್ಧವ್ ಠಾಕ್ರೆ ಹೇಳಿದ್ದರು. ಅಲ್ಲದೆ, 50:50 ಅನುಪಾತದಲ್ಲಿ ಸೀಟು ಹಂಚಿಕೆ ಆಗಬೇಕು ಎಂಬ ಬೇಡಿಕೆ ಇಟ್ಟಿದ್ದರು.ಇದು ಮಿತ್ರ ಪಕ್ಷಗಳ ನಡುವೆ ಮತ್ತೆ ಬಿಕ್ಕಟ್ಟು ಸೃಷ್ಟಿಸುವ ಸಾಧ್ಯತೆ ಇದೆ.