ಗೋಡ್ಸೆ ಕುರಿತುಸಾಧ್ವಿ ಪ್ರಜ್ಞಾ ಸಿಂಗ್ ಹೇಳಿಕೆ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಟ್ವೀಟ್,ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ವಿವಾದಕ್ಕೀಡಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗೋಡ್ಸೆ ಕುರಿತು ಈ ನಾಯಕರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದಿದ್ದಾರೆ. ಇಂತಹ ಹೇಳಿಕೆಗಳು ಪಕ್ಷದಸಿದ್ಧಾಂತಕ್ಕೆ ವಿರುದ್ಧವಾದವು ಎಂದಿರುವ ಶಾ,ಈ ವಿಷಯಕ್ಕೆ ಸಂಬಂಧಿಸಿ ಮುಂದಿನ ಕ್ರಮ ಕೈಗೊಳ್ಳುವುದಕ್ಕಾಗಿ 10 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಪಕ್ಷದ ಶಿಸ್ತು ಸಮಿತಿಗೆ ಸೂಚಿಸಿದ್ದಾರೆ.