ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಒಂದಿಂಚು ಭೂಮಿ ಮೇಲೆ ಕಣ್ಣಿಡಲೂ ಯಾರಿಂದಲೂ ಆಗದು: ಪ್ರಧಾನಿ ಮೋದಿ

ಭಾರತ ಮಾತೆಯನ್ನು ಕೆಣಕ ಬಂದವರಿಗೆ ತಕ್ಕ ಶಾಸ್ತಿಯಾಗಿದೆ ಎಂದ ಪ್ರಧಾನಿ
Last Updated 19 ಜೂನ್ 2020, 15:42 IST
ಅಕ್ಷರ ಗಾತ್ರ

ನವದೆಹಲಿ: ‘ನಮ್ಮ ಭೂಮಿಯ ಒಂದಿಂಚಿನ ಮೇಲೂ ಕಣ್ಣಿಡಲು ಯಾರಿಗೂ ಸಾಧ್ಯವಿಲ್ಲ. ಹಾಗೆ ಮಾಡುವ ಸಾಮರ್ಥ್ಯ ಇಂದು ನಮ್ಮಲ್ಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.

ಚೀನಾದೊಂದಿಗಿನ ಗಡಿ ಸಂಘರ್ಷಕ್ಕೆ ಸಂಬಂಧಿಸಿ ಕರೆಯಲಾದ ಸರ್ವಪಕ್ಷ ಸಭೆಯಲ್ಲಿ ವಿವಿಧ ಪಕ್ಷಗಳ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಏಕ ಕಾಲದಲ್ಲಿ ಹಲವು ಕಡೆ ಸಂಚರಿಸಿ ದಾಳಿ ನಡೆಸಬಲ್ಲ ಸಾಮರ್ಥ್ಯ ಭಾರತದ ಸಶ್ತ್ರ ಪಡೆಗಳಿಗೆ ಇದೆ’ ಎಂದು ಹೇಳಿದರು.

‘ನಮ್ಮ ಭೂಮಿಯನ್ನು ರಕ್ಷಿಸಿಕೊಳ್ಳಲು ಏನೆಲ್ಲ ಮಾಡಬೇಕೋ ಅದೆಲ್ಲವನ್ನೂ ಸಶ್ತ್ರ ಪಡೆಗಳು ಮಾಡಲಿವೆ. ಅದು ಸೇನಾ ನಿಯೋಜನೆ ಇರಬಹುದು, ಭೂಮಿ ಮೇಲಿನ ಅಥವಾ ಸಾಗರದಲ್ಲಿನ ಕ್ರಮ ಯಾವುದೇ ಆಗಿರಬಹುದು’ ಎಂದು ಮೋದಿ ಹೇಳಿದರು.

‘ಅವರು (ಚೀನಾ) ನಮ್ಮ ಗಡಿಯೊಳಕ್ಕೆ ನುಸುಳಿ ಯಾವುದೇ ಪೋಸ್ಟ್ ಅನ್ನು ವಶಪಡಿಸಿಕೊಂಡಿಲ್ಲ. ನಮ್ಮ 20 ಮಂದಿ ವೀರ ಯೋಧರು ಹುತಾತ್ಮರಾಗಿದ್ದಾರೆ. ಆದರೆ, ಭಾರತ ಮಾತೆಯನ್ನು ಕೆಣಕಲು ಬಂದವರಿಗೆ ತಕ್ಕ ಪಾಠ ಕಲಿಸಲಾಗಿದೆ’ ಎಂದು ಮೋದಿ ಹೇಳಿದ್ದಾರೆ.

‘ನಮ್ಮ ಗಡಿಯನ್ನು ರಕ್ಷಿಸಿಕೊಳ್ಳುವ ಸಲುವಾಗಿ ಕಳೆದ ಕೆಲವು ವರ್ಷಗಳಿಂದ ಗಡಿ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ನಮ್ಮ ಸಶಸ್ತ್ರ ಪಡೆಗಳಿಗೆ, ಯುದ್ಧವಿಮಾನಗಳಿಗೆ, ಅತ್ಯಾಧುನಿಕ ಹೆಲಿಕಾಪ್ಟರ್‌ಗಳಿಗೆ ಹಾಗೂ ಕ್ಷಿಪಣಿ ವ್ಯವಸ್ಥೆಗಳ ಅಗತ್ಯಕ್ಕನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಪ್ರಧಾನಿ ಹೇಳಿದ್ದಾರೆ.

‘ಇಲ್ಲಿವರೆಗೆ ಎಂದಿಗೂ ಪ್ರಶ್ನಿಸದ, ತಡೆಯದಂತಹವರನ್ನೇ ಈಗ ನಮ್ಮ ಯೋಧರು ತಡೆದು ನಿಲ್ಲಿಸಿದ್ದಾರೆ ಮತ್ತು ಎಚ್ಚರಿಕೆ ನೀಡಿದ್ದಾರೆ’ ಎಂದು ಮೋದಿ ಹೇಳಿದ್ದಾರೆ.

ನಮ್ಮ ಯೋಧರ ಮೇಲೆ ಇಡೀ ದೇಶಕ್ಕೇ ಅತೀವ ವಿಶ್ವಾಸವಿದೆ. ಇಡೀ ದೇಶ ಅವರೊಂದಿಗಿದೆ ಎಂದೂ ಮೋದಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT