<p><strong>ನವದೆಹಲಿ:</strong> ‘ನಮ್ಮ ಭೂಮಿಯ ಒಂದಿಂಚಿನ ಮೇಲೂ ಕಣ್ಣಿಡಲು ಯಾರಿಗೂ ಸಾಧ್ಯವಿಲ್ಲ. ಹಾಗೆ ಮಾಡುವ ಸಾಮರ್ಥ್ಯ ಇಂದು ನಮ್ಮಲ್ಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.</p>.<p>ಚೀನಾದೊಂದಿಗಿನ ಗಡಿ ಸಂಘರ್ಷಕ್ಕೆ ಸಂಬಂಧಿಸಿ ಕರೆಯಲಾದ ಸರ್ವಪಕ್ಷ ಸಭೆಯಲ್ಲಿ ವಿವಿಧ ಪಕ್ಷಗಳ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಏಕ ಕಾಲದಲ್ಲಿ ಹಲವು ಕಡೆ ಸಂಚರಿಸಿ ದಾಳಿ ನಡೆಸಬಲ್ಲ ಸಾಮರ್ಥ್ಯ ಭಾರತದ ಸಶ್ತ್ರ ಪಡೆಗಳಿಗೆ ಇದೆ’ ಎಂದು ಹೇಳಿದರು.</p>.<p>‘ನಮ್ಮ ಭೂಮಿಯನ್ನು ರಕ್ಷಿಸಿಕೊಳ್ಳಲು ಏನೆಲ್ಲ ಮಾಡಬೇಕೋ ಅದೆಲ್ಲವನ್ನೂ ಸಶ್ತ್ರ ಪಡೆಗಳು ಮಾಡಲಿವೆ. ಅದು ಸೇನಾ ನಿಯೋಜನೆ ಇರಬಹುದು, ಭೂಮಿ ಮೇಲಿನ ಅಥವಾ ಸಾಗರದಲ್ಲಿನ ಕ್ರಮ ಯಾವುದೇ ಆಗಿರಬಹುದು’ ಎಂದು ಮೋದಿ ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/all-party-meeting-with-pm-narendra-modi-over-india-china-border-issues-737968.html" itemprop="url">ಭಾರತ–ಚೀನಾ ಸಂಘರ್ಷ: ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ, ಯಾರು ಏನಂದ್ರು</a></p>.<p>‘ಅವರು (ಚೀನಾ) ನಮ್ಮ ಗಡಿಯೊಳಕ್ಕೆ ನುಸುಳಿ ಯಾವುದೇ ಪೋಸ್ಟ್ ಅನ್ನು ವಶಪಡಿಸಿಕೊಂಡಿಲ್ಲ. ನಮ್ಮ 20 ಮಂದಿ ವೀರ ಯೋಧರು ಹುತಾತ್ಮರಾಗಿದ್ದಾರೆ. ಆದರೆ, ಭಾರತ ಮಾತೆಯನ್ನು ಕೆಣಕಲು ಬಂದವರಿಗೆ ತಕ್ಕ ಪಾಠ ಕಲಿಸಲಾಗಿದೆ’ ಎಂದು ಮೋದಿ ಹೇಳಿದ್ದಾರೆ.</p>.<p>‘ನಮ್ಮ ಗಡಿಯನ್ನು ರಕ್ಷಿಸಿಕೊಳ್ಳುವ ಸಲುವಾಗಿ ಕಳೆದ ಕೆಲವು ವರ್ಷಗಳಿಂದ ಗಡಿ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ನಮ್ಮ ಸಶಸ್ತ್ರ ಪಡೆಗಳಿಗೆ, ಯುದ್ಧವಿಮಾನಗಳಿಗೆ, ಅತ್ಯಾಧುನಿಕ ಹೆಲಿಕಾಪ್ಟರ್ಗಳಿಗೆ ಹಾಗೂ ಕ್ಷಿಪಣಿ ವ್ಯವಸ್ಥೆಗಳ ಅಗತ್ಯಕ್ಕನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಪ್ರಧಾನಿ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/india-china-border-issue-defence-minister-rajnath-singh-says-there-was-no-intelligence-failure-737989.html" itemprop="url">ಚೀನಾ ಗಡಿ ಸಂಘರ್ಷ: ಗುಪ್ತಚರ ವೈಫಲ್ಯ ಆರೋಪ ಅಲ್ಲಗಳೆದ ರಾಜನಾಥ್ ಸಿಂಗ್</a></p>.<p>‘ಇಲ್ಲಿವರೆಗೆ ಎಂದಿಗೂ ಪ್ರಶ್ನಿಸದ, ತಡೆಯದಂತಹವರನ್ನೇ ಈಗ ನಮ್ಮ ಯೋಧರು ತಡೆದು ನಿಲ್ಲಿಸಿದ್ದಾರೆ ಮತ್ತು ಎಚ್ಚರಿಕೆ ನೀಡಿದ್ದಾರೆ’ ಎಂದು ಮೋದಿ ಹೇಳಿದ್ದಾರೆ.</p>.<p>ನಮ್ಮ ಯೋಧರ ಮೇಲೆ ಇಡೀ ದೇಶಕ್ಕೇ ಅತೀವ ವಿಶ್ವಾಸವಿದೆ. ಇಡೀ ದೇಶ ಅವರೊಂದಿಗಿದೆ ಎಂದೂ ಮೋದಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ನಮ್ಮ ಭೂಮಿಯ ಒಂದಿಂಚಿನ ಮೇಲೂ ಕಣ್ಣಿಡಲು ಯಾರಿಗೂ ಸಾಧ್ಯವಿಲ್ಲ. ಹಾಗೆ ಮಾಡುವ ಸಾಮರ್ಥ್ಯ ಇಂದು ನಮ್ಮಲ್ಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.</p>.<p>ಚೀನಾದೊಂದಿಗಿನ ಗಡಿ ಸಂಘರ್ಷಕ್ಕೆ ಸಂಬಂಧಿಸಿ ಕರೆಯಲಾದ ಸರ್ವಪಕ್ಷ ಸಭೆಯಲ್ಲಿ ವಿವಿಧ ಪಕ್ಷಗಳ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಏಕ ಕಾಲದಲ್ಲಿ ಹಲವು ಕಡೆ ಸಂಚರಿಸಿ ದಾಳಿ ನಡೆಸಬಲ್ಲ ಸಾಮರ್ಥ್ಯ ಭಾರತದ ಸಶ್ತ್ರ ಪಡೆಗಳಿಗೆ ಇದೆ’ ಎಂದು ಹೇಳಿದರು.</p>.<p>‘ನಮ್ಮ ಭೂಮಿಯನ್ನು ರಕ್ಷಿಸಿಕೊಳ್ಳಲು ಏನೆಲ್ಲ ಮಾಡಬೇಕೋ ಅದೆಲ್ಲವನ್ನೂ ಸಶ್ತ್ರ ಪಡೆಗಳು ಮಾಡಲಿವೆ. ಅದು ಸೇನಾ ನಿಯೋಜನೆ ಇರಬಹುದು, ಭೂಮಿ ಮೇಲಿನ ಅಥವಾ ಸಾಗರದಲ್ಲಿನ ಕ್ರಮ ಯಾವುದೇ ಆಗಿರಬಹುದು’ ಎಂದು ಮೋದಿ ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/all-party-meeting-with-pm-narendra-modi-over-india-china-border-issues-737968.html" itemprop="url">ಭಾರತ–ಚೀನಾ ಸಂಘರ್ಷ: ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ, ಯಾರು ಏನಂದ್ರು</a></p>.<p>‘ಅವರು (ಚೀನಾ) ನಮ್ಮ ಗಡಿಯೊಳಕ್ಕೆ ನುಸುಳಿ ಯಾವುದೇ ಪೋಸ್ಟ್ ಅನ್ನು ವಶಪಡಿಸಿಕೊಂಡಿಲ್ಲ. ನಮ್ಮ 20 ಮಂದಿ ವೀರ ಯೋಧರು ಹುತಾತ್ಮರಾಗಿದ್ದಾರೆ. ಆದರೆ, ಭಾರತ ಮಾತೆಯನ್ನು ಕೆಣಕಲು ಬಂದವರಿಗೆ ತಕ್ಕ ಪಾಠ ಕಲಿಸಲಾಗಿದೆ’ ಎಂದು ಮೋದಿ ಹೇಳಿದ್ದಾರೆ.</p>.<p>‘ನಮ್ಮ ಗಡಿಯನ್ನು ರಕ್ಷಿಸಿಕೊಳ್ಳುವ ಸಲುವಾಗಿ ಕಳೆದ ಕೆಲವು ವರ್ಷಗಳಿಂದ ಗಡಿ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ನಮ್ಮ ಸಶಸ್ತ್ರ ಪಡೆಗಳಿಗೆ, ಯುದ್ಧವಿಮಾನಗಳಿಗೆ, ಅತ್ಯಾಧುನಿಕ ಹೆಲಿಕಾಪ್ಟರ್ಗಳಿಗೆ ಹಾಗೂ ಕ್ಷಿಪಣಿ ವ್ಯವಸ್ಥೆಗಳ ಅಗತ್ಯಕ್ಕನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಪ್ರಧಾನಿ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/india-china-border-issue-defence-minister-rajnath-singh-says-there-was-no-intelligence-failure-737989.html" itemprop="url">ಚೀನಾ ಗಡಿ ಸಂಘರ್ಷ: ಗುಪ್ತಚರ ವೈಫಲ್ಯ ಆರೋಪ ಅಲ್ಲಗಳೆದ ರಾಜನಾಥ್ ಸಿಂಗ್</a></p>.<p>‘ಇಲ್ಲಿವರೆಗೆ ಎಂದಿಗೂ ಪ್ರಶ್ನಿಸದ, ತಡೆಯದಂತಹವರನ್ನೇ ಈಗ ನಮ್ಮ ಯೋಧರು ತಡೆದು ನಿಲ್ಲಿಸಿದ್ದಾರೆ ಮತ್ತು ಎಚ್ಚರಿಕೆ ನೀಡಿದ್ದಾರೆ’ ಎಂದು ಮೋದಿ ಹೇಳಿದ್ದಾರೆ.</p>.<p>ನಮ್ಮ ಯೋಧರ ಮೇಲೆ ಇಡೀ ದೇಶಕ್ಕೇ ಅತೀವ ವಿಶ್ವಾಸವಿದೆ. ಇಡೀ ದೇಶ ಅವರೊಂದಿಗಿದೆ ಎಂದೂ ಮೋದಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>