‘ಪೌರತ್ವ ಕಾಯ್ದೆಯಿಂದಾಗಲಿ, ಎನ್ಆರ್ಸಿಯಿಂದಾಗಲಿ ದೇಶದ ನಾಗರಿಕರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಇದು ನೆರೆಯ ದೇಶಗಳಲ್ಲಿ ಕಿರುಕುಳ ಅನುಭವಿಸಿದ ಅಲ್ಪಸಂಖ್ಯಾತರಿಗೆ ತಮ್ಮ ಹಕ್ಕುಗಳನ್ನು ನೀಡುವ ಕಾಯ್ದೆ. ಯಾರ ಹಕ್ಕನ್ನೂ ಇದು ಕಸಿದುಕೊಳ್ಳುವುದಿಲ್ಲ. ಆದ್ದರಿಂದ ಈ ನೆಲದ ಮಕ್ಕಳಾಗಿರುವ ಮುಸ್ಲಿಮರು ಭಯಪಡುವ ಅಗತ್ಯವಿಲ್ಲ’ ಎಂದು ಇಲ್ಲಿನ ರಾಮಲೀಲಾ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ ಹೇಳಿದರು.