‘ಆತ್ಮ ನಿರ್ಭರ್ ಉತ್ತರಪ್ರದೇಶ ರೋಜ್ಗಾರ್ ಅಭಿಯಾನ’ಕ್ಕೆ ಚಾಲನೆ ನೀಡಿ ಮಾತನಾಡಿದ ಮೋದಿ, ‘ನಾವೆಲ್ಲರೂ ಏರು–ಪೇರುಗಳನ್ನು ಕಂಡಿದ್ದೇವೆ. ನಮ್ಮ ಸಾಮಾಜಿಕ ಜೀವನದಲ್ಲಿ ಸಮಸ್ಯೆಗಳು ಎದುರಾಗುತ್ತವೆ. ಒಂದೇ ಸಮಯದಲ್ಲಿ ಇಡೀ ಜಗತ್ತು ಸಂಕಷ್ಟಕ್ಕೆ ಸಿಲುಕುತ್ತದೆ ಎಂದು ಯಾರೊಬ್ಬರೂ ಎಣಿಸಿರಲಿಲ್ಲ. ಪ್ರತಿಯೊಬ್ಬರ ಮೇಲೂ ಇದು ಪರಿಣಾಮ ಬೀರಿದೆ ಮತ್ತು ಎಲ್ಲರೂ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಯಾವಾಗ ನಾವೆಲ್ಲರೂ ಈ ಸಾಂಕ್ರಾಮಿಕ ಕಾಯಿಲೆಯಿಂದ ನಿರಾಳರಾಗುತ್ತೇವೆ ಎಂಬುದು ಯಾರಿಗೂ ಗೊತ್ತಿಲ್ಲ. ಎಲ್ಲಿಯವರೆಗೆ ಔಷಧ ಅಭಿವೃದ್ಧಿಪಡಿಸಲಾಗುವುದಿಲ್ಲವೇ ಅಲ್ಲಿಯವರೆಗೆ ಎರಡು ಮೀಟರ್ ಅಂತರ ಕಾಯ್ದುಕೊಳ್ಳಬೇಕು ಮತ್ತು ಮಾಸ್ಕ್ ಧರಿಸಬೇಕು ಎಂಬುದು ನಮಗೆಲ್ಲ ಗೊತ್ತಿದೆ’ ಎಂದು ಹೇಳಿದ್ದಾರೆ.