<p><strong>ನವದೆಹಲಿ: </strong>‘ಆರೋಗ್ಯವಂತ ವ್ಯಕ್ತಿ, ಆರೋಗ್ಯಕರ ಸಮಾಜ ಹಾಗೂ ಆರೋಗ್ಯಕರ ಆರ್ಥಿಕತೆ’ ಎಂಬಜೈನ ಮುನಿ ಆಚಾರ್ಯ ಮಹಾಪ್ರಜ್ಞ ಅವರ ಬೋಧನೆ ಸದಾ ಸ್ಫೂರ್ತಿದಾಯಕ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.</p>.<p>ಜೈನ ಮುನಿ ಆಚಾರ್ಯ ಪ್ರಜ್ಞ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಆನ್ಲೈನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೊರೊನಾ ಸೋಂಕಿನಿಂದ ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ಜನರಿಗೆ, ದೇಶಕ್ಕೆ ಅವರ ಬೋಧನೆ ಮಾರ್ಗದರ್ಶಿಯಾಗಿವೆ’ ಎಂದರು.</p>.<p>ಆಚಾರ್ಯ ಮಹಾಪ್ರಜ್ಞ ಅವರು ಜೈನ ಧರ್ಮದ ಶ್ವೇತಾಂಬರ ತೇರಾಪಂಥದ 10ನೇ ಮುನಿ. ಅವರು ಸಂಸ್ಕೃತ, ಹಿಂದಿ, ಗುಜರಾತಿ ಹಾಗೂ ಇಂಗ್ಲಿಷ್ನಲ್ಲಿ 300ಕ್ಕೂ ಹೆಚ್ಚು ಗ್ರಂಥ ರಚಿಸಿದ್ದಾರೆ. ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್ ಕಲಾಂ ರಚಿಸಿದ ಪುಸ್ತಕವೊಂದರ ಸಹಲೇಖಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.</p>.<p>‘ಅವರ ಬೋಧನೆಗಳನ್ನು ಸಮಾಜಕ್ಕೆ ತಿಳಿಸುವ ಕೆಲಸವಾಗಬೇಕು. ನೆಮ್ಮದಿ ತುಂಬಿದ ಕುಟುಂಬ ಮತ್ತು ಸಂಪದ್ಭರಿತ ರಾಷ್ಟ್ರ ಎಂಬ ಮುನಿಗಳ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಅವಕಾಶ ಲಭಿಸಿದೆ’ ಎಂದು ಪ್ರಧಾನಿ ಹೇಳಿದರು.</p>.<p>‘ಯೋಗಾಭ್ಯಾಸದ ಮೂಲಕ ಒತ್ತಡ, ಖಿನ್ನತೆ ಮುಕ್ತ ಜೀವನ ನಡೆಸುವ ಬಗೆಯನ್ನು ಅವರು ಲಕ್ಷಾಂತರ ಜನರಿಗೆ ತಿಳಿಸಿಕೊಟ್ಟಿದ್ದಾರೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಆರೋಗ್ಯವಂತ ವ್ಯಕ್ತಿ, ಆರೋಗ್ಯಕರ ಸಮಾಜ ಹಾಗೂ ಆರೋಗ್ಯಕರ ಆರ್ಥಿಕತೆ’ ಎಂಬಜೈನ ಮುನಿ ಆಚಾರ್ಯ ಮಹಾಪ್ರಜ್ಞ ಅವರ ಬೋಧನೆ ಸದಾ ಸ್ಫೂರ್ತಿದಾಯಕ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.</p>.<p>ಜೈನ ಮುನಿ ಆಚಾರ್ಯ ಪ್ರಜ್ಞ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಆನ್ಲೈನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೊರೊನಾ ಸೋಂಕಿನಿಂದ ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ಜನರಿಗೆ, ದೇಶಕ್ಕೆ ಅವರ ಬೋಧನೆ ಮಾರ್ಗದರ್ಶಿಯಾಗಿವೆ’ ಎಂದರು.</p>.<p>ಆಚಾರ್ಯ ಮಹಾಪ್ರಜ್ಞ ಅವರು ಜೈನ ಧರ್ಮದ ಶ್ವೇತಾಂಬರ ತೇರಾಪಂಥದ 10ನೇ ಮುನಿ. ಅವರು ಸಂಸ್ಕೃತ, ಹಿಂದಿ, ಗುಜರಾತಿ ಹಾಗೂ ಇಂಗ್ಲಿಷ್ನಲ್ಲಿ 300ಕ್ಕೂ ಹೆಚ್ಚು ಗ್ರಂಥ ರಚಿಸಿದ್ದಾರೆ. ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್ ಕಲಾಂ ರಚಿಸಿದ ಪುಸ್ತಕವೊಂದರ ಸಹಲೇಖಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.</p>.<p>‘ಅವರ ಬೋಧನೆಗಳನ್ನು ಸಮಾಜಕ್ಕೆ ತಿಳಿಸುವ ಕೆಲಸವಾಗಬೇಕು. ನೆಮ್ಮದಿ ತುಂಬಿದ ಕುಟುಂಬ ಮತ್ತು ಸಂಪದ್ಭರಿತ ರಾಷ್ಟ್ರ ಎಂಬ ಮುನಿಗಳ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಅವಕಾಶ ಲಭಿಸಿದೆ’ ಎಂದು ಪ್ರಧಾನಿ ಹೇಳಿದರು.</p>.<p>‘ಯೋಗಾಭ್ಯಾಸದ ಮೂಲಕ ಒತ್ತಡ, ಖಿನ್ನತೆ ಮುಕ್ತ ಜೀವನ ನಡೆಸುವ ಬಗೆಯನ್ನು ಅವರು ಲಕ್ಷಾಂತರ ಜನರಿಗೆ ತಿಳಿಸಿಕೊಟ್ಟಿದ್ದಾರೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>