ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇದಾರನಾಥ ಅಭಿವೃದ್ಧಿ: ಪ್ರಧಾನಿ ನರೇಂದ್ರ ಮೋದಿ ಪರಿಶೀಲನೆ

Last Updated 10 ಜೂನ್ 2020, 14:21 IST
ಅಕ್ಷರ ಗಾತ್ರ

ನವದೆಹಲಿ/ಡೆಹ್ರಾಡೂನ್‌: ಕೇದಾರನಾಥ ಧಾಮ್‌ ಅಭಿವೃದ್ಧಿ ಮತ್ತು ಪುನರ್‌ ನಿರ್ಮಾಣ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಎಲ್ಲ ಕಾಮಗಾರಿಗಳು ಪರಿಸರ ಸ್ನೇಹಿ ಆಗಿರುವಂತೆ ನೊಡಿಕೊಳ್ಳಬೇಕು ಎಂದು ಬುಧವಾರ ಸೂಚಿಸಿದ್ದಾರೆ.

ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಹಾಗೂ ಮುಖ್ಯ ಕಾರ್ಯದರ್ಶಿ ಉತ್ಪಲ್‌ ಕುಮಾರ್‌ ಸಿಂಗ್‌ ಜೊತೆ ವಿಡಿಯೊ ಮೂಲಕ ಮಾಹಿತಿ ಪಡೆದ ಮೋದಿ,ಯೋಜನೆ ಕಾಮಗಾರಿಗೆ ವೇಗ ನೀಡಬೇಕು ಮತ್ತು ಹಣಕಾಸಿದ ಕೊರತೆ ಇಲ್ಲ ಎಂದು ಭರವಸೆ ನೀಡಿದರು.

ಉತ್ತರಾಖಂಡ್‌ದಲ್ಲಿ 2013ರಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಕೇದಾರನಾಥ ಕ್ಷೇತ್ರಕ್ಕೆ ಭಾರಿ ಹಾನಿ ಉಂಟಾಗಿತ್ತು. ಈ ಕ್ಷೇತ್ರದ ಅಭಿವೃದ್ಧಿ ಹಾಗೂ ಪುನರ್‌ ನಿರ್ಮಾಣ ಯೋಜನೆಗೆ 2017ರಲ್ಲಿ ಮೋದಿ ಚಾಲನೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT