ಕೆಂಪು, ಹಸಿರು ಮತ್ತು ಕಿತ್ತಳೆ ವಲಯಗಳೆಂದು ಗುರುತಿಸುವಿಕೆಯ ನಿಯಮಗಳಿಗೆ ಹಲವು ರಾಜ್ಯಗಳು ಆಕ್ಷೇಪಣೆ ವ್ಯಕ್ತಪಡಿಸಿವೆ. ವಲಸಿಗರು ಜಿಲ್ಲೆಗಳಿಗೆ ಮರಳುವ ಮೂಲಕ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಹೆಚ್ಚಿನ ಜಿಲ್ಲೆಗಳು ಕೆಂಪು ವಲಯದ ವ್ಯಾಪ್ತಿಗೆ ಬರುತ್ತಿವೆ. ಹೀಗಾಗಿ ಇದು ಸಹಜ ಸ್ಥಿತಿಗೆ ಮರಳಲು ಕಷ್ಟವಾಗುತ್ತಿದೆ ಎಂದು ವಾದಿಸಿವೆ ಎಂದು ಮೂಲಗಳು ತಿಳಿಸಿವೆ.