<p><strong>ನವದೆಹಲಿ:</strong> ದೇಶದಾದ್ಯಂತ ಸದ್ಯ ಜಾರಿಯಲ್ಲಿರುವ ಲಾಕ್ಡೌನ್ ಕುರಿತಾಗಿ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಜ್ಯ ಮುಖ್ಯಮಂತ್ರಿಗಳೊಂದಿಗೆ ಮತ್ತೊಂದು ವಿಡಿಯೊ ಕಾನ್ಫರೆನ್ಸ್ ನಡೆಸಲಿದ್ದು, ಮೇ 17 ರಂದು ಮುಕ್ತಾಯಗೊಳ್ಳುವ ನಿರೀಕ್ಷೆಯಿರುವ ಲಾಕ್ಡೌನ್ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.</p>.<p>ಇಂದು ಬೆಳಗ್ಗೆ ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಆರೋಗ್ಯ ಕಾರ್ಯದರ್ಶಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು.</p>.<p>ಕೆಂಪು, ಹಸಿರು ಮತ್ತು ಕಿತ್ತಳೆ ವಲಯಗಳೆಂದು ಗುರುತಿಸುವಿಕೆಯ ನಿಯಮಗಳಿಗೆ ಹಲವು ರಾಜ್ಯಗಳು ಆಕ್ಷೇಪಣೆ ವ್ಯಕ್ತಪಡಿಸಿವೆ. ವಲಸಿಗರು ಜಿಲ್ಲೆಗಳಿಗೆ ಮರಳುವ ಮೂಲಕ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಹೆಚ್ಚಿನ ಜಿಲ್ಲೆಗಳು ಕೆಂಪು ವಲಯದ ವ್ಯಾಪ್ತಿಗೆ ಬರುತ್ತಿವೆ. ಹೀಗಾಗಿ ಇದು ಸಹಜ ಸ್ಥಿತಿಗೆ ಮರಳಲು ಕಷ್ಟವಾಗುತ್ತಿದೆ ಎಂದು ವಾದಿಸಿವೆ ಎಂದು ಮೂಲಗಳು ತಿಳಿಸಿವೆ.</p>.<p>ಸದ್ಯ ವಲಯಗಳನ್ನು ವಿಂಗಡಿಸುವ ಸಂದರ್ಭದಲ್ಲಿ, ಕ್ವಾರಂಟೈನ್ ಕೇಂದ್ರಗಳನ್ನು ಹೊಂದಿರುವ ಪ್ರದೇಶಗಳನ್ನು ಕೆಂಪು ವಲಯಗಳಾಗಿ ವಿಂಗಡಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಾದ್ಯಂತ ಸದ್ಯ ಜಾರಿಯಲ್ಲಿರುವ ಲಾಕ್ಡೌನ್ ಕುರಿತಾಗಿ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಜ್ಯ ಮುಖ್ಯಮಂತ್ರಿಗಳೊಂದಿಗೆ ಮತ್ತೊಂದು ವಿಡಿಯೊ ಕಾನ್ಫರೆನ್ಸ್ ನಡೆಸಲಿದ್ದು, ಮೇ 17 ರಂದು ಮುಕ್ತಾಯಗೊಳ್ಳುವ ನಿರೀಕ್ಷೆಯಿರುವ ಲಾಕ್ಡೌನ್ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.</p>.<p>ಇಂದು ಬೆಳಗ್ಗೆ ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಆರೋಗ್ಯ ಕಾರ್ಯದರ್ಶಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು.</p>.<p>ಕೆಂಪು, ಹಸಿರು ಮತ್ತು ಕಿತ್ತಳೆ ವಲಯಗಳೆಂದು ಗುರುತಿಸುವಿಕೆಯ ನಿಯಮಗಳಿಗೆ ಹಲವು ರಾಜ್ಯಗಳು ಆಕ್ಷೇಪಣೆ ವ್ಯಕ್ತಪಡಿಸಿವೆ. ವಲಸಿಗರು ಜಿಲ್ಲೆಗಳಿಗೆ ಮರಳುವ ಮೂಲಕ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಹೆಚ್ಚಿನ ಜಿಲ್ಲೆಗಳು ಕೆಂಪು ವಲಯದ ವ್ಯಾಪ್ತಿಗೆ ಬರುತ್ತಿವೆ. ಹೀಗಾಗಿ ಇದು ಸಹಜ ಸ್ಥಿತಿಗೆ ಮರಳಲು ಕಷ್ಟವಾಗುತ್ತಿದೆ ಎಂದು ವಾದಿಸಿವೆ ಎಂದು ಮೂಲಗಳು ತಿಳಿಸಿವೆ.</p>.<p>ಸದ್ಯ ವಲಯಗಳನ್ನು ವಿಂಗಡಿಸುವ ಸಂದರ್ಭದಲ್ಲಿ, ಕ್ವಾರಂಟೈನ್ ಕೇಂದ್ರಗಳನ್ನು ಹೊಂದಿರುವ ಪ್ರದೇಶಗಳನ್ನು ಕೆಂಪು ವಲಯಗಳಾಗಿ ವಿಂಗಡಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>