ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹20 ಲಕ್ಷ ಕೋಟಿ ಪ್ಯಾಕೇಜ್‌ ಎಂಬುದು ಕ್ರೂರ ವ್ಯಂಗ್ಯವಾಗಿ ಮಾರ್ಪಟ್ಟಿದೆ: ಸೋನಿಯಾ

Last Updated 22 ಮೇ 2020, 12:08 IST
ಅಕ್ಷರ ಗಾತ್ರ

ನವದೆಹಲಿ:ಕೊರೊನಾ ವೈರಸ್‌ ಅನ್ನು ನಿಭಾಯಿಸಿದ ರೀತಿಯ ಕುರಿತು ಸೋನಿಯಾ ಗಾಂಧಿ ಅವರು ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಕೇಂದ್ರವು ಒಕ್ಕೂಟ ವ್ಯವಸ್ಥೆಯನ್ನೇ ಮರೆತಿದೆ. ಪ್ರಜಾಸತ್ತಾತ್ಮಕವಾಗಿರುವುದನ್ನೇ ತ್ಯಜಿಸಿದೆ ಎಂದು ಆರೋಪಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ವಲಸಿಗರು ಎದುರಿಸುತ್ತಿರುವ ದುಃಸ್ಥಿತಿಯ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ವಿರೋಧ ಪಕ್ಷಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ಲಾಕ್‌ಡೌನ್‌ಗಳ ಮಾನದಂಡಗಳ ಬಗ್ಗೆ ಸರ್ಕಾರದಲ್ಲಿ ಅನಿಶ್ಚಿತತೆ ತಲೆದೋರಿದೆ. ಮತ್ತು ಅದನ್ನು ಅಂತ್ಯಗೊಳಿಸುವ ಕುರಿತು ಯಾವುದೇ ತಂತ್ರಗಳನ್ನೂ ರೂಪಿಸಿಲ್ಲ,’ ಎಂದು ಅವರು ಹೇಳಿದ್ದಾರೆ.

ವಲಸಿಗರೂ ಸೇರಿದಂತೆ ದೇಶದ ಅರ್ಧದಷ್ಟಿರುವ 13 ಕೋಟಿ ಬಡ ಕುಟುಂಬಗಳನ್ನು ಕೇಂದ್ರ ಸರ್ಕಾರ ಅತ್ಯಂತ ಕ್ರೂರವಾಗಿ ನಿರ್ಲಕ್ಷಿಸಿದೆ ಎಂದು ಅವರು ಆರೋಪಿಸಿದ್ದಾರೆ.

‘ಪ್ರಧಾನ ಮಂತ್ರಿ ಘೋಷಿಸಿದ ₹20 ಲಕ್ಷ ಕೋಟಿ ರೂ. ಪ್ಯಾಕೇಜ್ ದೇಶದಲ್ಲಿ ಕ್ರೂರ ವ್ಯಂಗ್ಯವಾಗಿ ಪರಿಣಮಿಸಿದೆ’ಎಂದು ಅವರು ಹೇಳಿದರು.

‘ಪ್ರಧಾನ ಮಂತ್ರಿ ಘೋಷಿಸಿದ ₹20 ಲಕ್ಷ ಕೋಟಿ ರೂ. ಪ್ಯಾಕೇಜ್ ದೇಶದಲ್ಲಿ ಕ್ರೂರ ವ್ಯಂಗ್ಯವಾಗಿ ಪರಿಣಮಿಸಿದೆ’ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT