ಹಾವೇರಿ: ಬೆಂಗಳೂರಿನಿಂದ ಶಿರಸಿಗೆ ತೆರಳುತ್ತಿದ್ದ ವಿಆರ್ಎಲ್ ಸಂಸ್ಥೆಯ ಬಸ್ ಜಿಲ್ಲೆಯ ಹಾನಗಲ್ ನಾಲ್ಕರ ಕ್ರಾಸ್ ಬಳಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ.
ಮೃತರನ್ನು ಶಿರಸಿಯ ವಿಜಯಲಕ್ಷ್ಮಿ (45) ಮತ್ತು ಗೀತಾ (50)ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 13 ಜನ ಗಾಯಗೊಂಡಿದ್ದಾರೆ.
ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.