ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆನ್ನೈ: ಪ್ರತಿಭಟನೆ ಹತ್ತಿಕ್ಕಿದ ಪೊಲೀಸರು

Last Updated 19 ಡಿಸೆಂಬರ್ 2019, 19:44 IST
ಅಕ್ಷರ ಗಾತ್ರ

ಚೆನ್ನೈ: ಇಲ್ಲಿನ ಮದ್ರಾಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎರಡು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಪೊಲೀಸರು ಬಲವಂತವಾಗಿ ಕೊನೆಗೊಳಿಸಿದ್ದಾರೆ.

ಬುಧವಾರ ರಾತ್ರಿ ವಿಶ್ವವಿದ್ಯಾಲಯದ ಆವರಣ ಪ್ರವೇಶಿಸಿದ ಪೊಲೀಸರು, ಪ್ರತಿಭಟನನಿರತ ವಿದ್ಯಾರ್ಥಿಗಳನ್ನು ಒತ್ತಾಯಪೂರ್ವಕವಾಗಿ ಬಸ್‌ಗಳಲ್ಲಿ ತುಂಬಿ, ಜಾಗ ಖಾಲಿ ಮಾಡಿಸಿದರು.

ಪೊಲೀಸರು, ವಿಶ್ವವಿದ್ಯಾಲಯದ ಆಡಳಿತ ವರ್ಗದ ಎಚ್ಚರಿಕೆಯನ್ನು ಲೆಕ್ಕಿಸದೆ ಮಂಗಳವಾರ ಪ್ರತಿಭಟನೆ ಆರಂಭಿಸಿದ್ದ ವಿದ್ಯಾರ್ಥಿಗಳು, ಕ್ಯಾಂಪಸ್‌ ಬಿಟ್ಟು ಕದಲಿರಲಿಲ್ಲ.

ಮಕ್ಕಳ್ ನೀಧಿ ಮಯ್ಯಂ (ಎಂಎನ್‌ಎಂ) ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರು ಗುರುವಾರ ಬೆಳಿಗ್ಗೆ ವಿದ್ಯಾರ್ಥಿಗಳ ಭೇಟಿಗೆ ಯತ್ನಿಸಿದರು. ಆದರೆ ಕ್ಯಾಂಪಸ್ ಪ್ರವೇಶಿಸಲು ಸಾಧ್ಯವಾಗದೇ ಗೇಟ್‌ನಲ್ಲಿಯೇ ನಿಂತು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT