ಪಹಾಡ್ಗಂಜ್ನ ಪರೀಕ್ಷಾ ಕೇಂದ್ರವೊಂದರಲ್ಲಿ ಅವರು ಪರೀಕ್ಷೆ ಬರೆಯಬೇಕಿತ್ತು. ಆದರೆ, ಪರೀಕ್ಷಾ ಕೇಂದ್ರದ ಬಗ್ಗೆ ಗೊಂದಲವುಂಟಾಗಿ ಮತ್ತೊಂದು ಕೇಂದ್ರಕ್ಕೆ ತೆರಳಿದ್ದರು. ಅದು ತಾವು ಬರೆಯಬೇಕಿದ್ದ ಕೇಂದ್ರವಲ್ಲ ಎಂದು ಅರಿತು ಸರಿಯಾದ ಕೇಂದ್ರಕ್ಕೆ ಬಂದರು. ಆದರೆ, ಅಷ್ಟರಲ್ಲಿ ಪರೀಕ್ಷೆ ಆರಂಭವಾಗಿತ್ತು. ಕೊಠಡಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದವರು ನಿಯಮದ ಪ್ರಕಾರ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಅಲ್ಲಿಂದ ತಮ್ಮ ಕೊಠಡಿಗೆ ವಾಪಸಾದ ವರುಣ್, ತಮ್ಮ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡರು.