ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರದಲ್ಲಿ ಎನ್‌ಕೌಂಟರ್‌: ಮೂವರು ಉಗ್ರರ ಹತ್ಯೆ, ಕಾನ್‌ಸ್ಟೆಬಲ್‌ ಸಾವು

Last Updated 17 ಅಕ್ಟೋಬರ್ 2018, 4:59 IST
ಅಕ್ಷರ ಗಾತ್ರ

ಶ್ರೀನಗರ: ಇಲ್ಲಿನ ಫತೇ ಕದಲ್‌ ಪ್ರದೇಶದಲ್ಲಿ ಯೋಧರು ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಘಟನೆಯಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ಒಬ್ಬರು ಮೃತಪಟ್ಟಿದ್ದಾರೆ.ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಸೇನಾ ಯೋಧರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ.

ಉಗ್ರರು ಅಡಗಿದ್ದ ಮನೆಯನ್ನು ಯೋಧರು ಮತ್ತು ಪೊಲೀಸರು ಸುತ್ತುವರಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದ ಯೋಧರು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಈ ಪ್ರದೇಶದಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಉಗ್ರರು ಯಾವ ಸಂಘಟನೆಗೆ ಸೇರಿದವರು ಹಾಗೂ ಎಷ್ಟು ಜನ ಇದ್ದರು ಎಂಬ ಮಾಹಿತಿ ಲಭ್ಯವಾಗಿಲ್ಲ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT