ನವದೆಹಲಿ: ‘ರಾಜಕೀಯ ಪಕ್ಷಗಳು, ಉದ್ದಿಮೆದಾರರು ತಮ್ಮದೇ ಆದ ಪತ್ರಿಕೆಗಳನ್ನು ಮತ್ತು ಸುದ್ದಿ ವಾಹಿನಿಗಳನ್ನು ಪ್ರಾರಂಭಿಸುತ್ತಿದ್ದಾರೆ. ಈ ಮೂಲಕ ಪಟ್ಟಭದ್ರ ಹಿತಾಸಕ್ತಿಗಳನ್ನು ಉತ್ತೇಜಿಸುತ್ತಿದ್ದು, ಪತ್ರಿಕೋದ್ಯಮದ ಮೌಲ್ಯಗಳನ್ನೂ ರಾಜಿ ಮಾಡಿಕೊಳ್ಳುತ್ತಿದ್ದಾರೆ’ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದರು.