ಶ್ರೀನಗರ: ‘ಕೇಂದ್ರಾಡಳಿತ ಪ್ರದೇಶದಿಂದ ಹೊರಗೆ ಬಂಧಿತರಾಗಿರುವವರನ್ನು ಮಾನವೀಯ ದೃಷ್ಟಿಯ ಆಧಾರದಲ್ಲಿ ಬಿಡುಗಡೆ ಮಾಡಲು ಜಮ್ಮು ಮತ್ತು ಕಾಶ್ಮೀರದ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕು’ ಎಂದು ನ್ಯಾಷನಲ್ ಕಾನ್ಫರೆನ್ಸ್ನ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಶುಕ್ರವಾರವಷ್ಟೇ (ಮಾರ್ಚ್ 13)ಬಂಧನದಿಂದ ಬಿಡುಗಡೆಯಾಗಿರುವ ಫಾರೂಕ್ ಅವರ ಮೊದಲ ಹೇಳಿಕೆ ಇದಾಗಿದ್ದು, ‘ಬಿಡುಗಡೆಯಾದ ಬಳಿಕ ಪ್ರಜ್ಞಾಪೂರ್ವಕವಾಗಿ ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ತಪ್ಪಿಸುತ್ತಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.
‘ರಾಜಕೀ ಯವು ನಮ್ಮನ್ನು ವಿಭಜನೆ ಮಾಡುವ ಮೊದಲು, ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಪಕ್ಷದ ನಾಯಕರು ಒಟ್ಟಾಗಿ ಹೊರಗಿನ ಕಾರಾಗೃಹಗಳಲ್ಲಿ ಬಂಧಿತರಾಗಿರುವ ರಾಜ್ಯದ ಜನರನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕೆಂದು ನಾನು ಕೋರುತ್ತೇನೆ’ ಎಂದು ಅಬ್ದುಲ್ಲಾ ಅವರು ತಿಳಿಸಿದರು.