ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜಕೀಯ ಪಕ್ಷಗಳಿಗೆ ದೇಣಿಗೆ ಹೆಸರು ಬಹಿರಂಗಕ್ಕೆ ಸೂಚನೆ

Last Updated 8 ಜನವರಿ 2020, 18:44 IST
ಅಕ್ಷರ ಗಾತ್ರ

ನವದೆಹಲಿ: ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿ ರಹಸ್ಯ ಕಾಪಾಡುವಂತೆ ಸೂಚಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ಹೆಸರುಗಳನ್ನು ಬಹಿರಂಗಪಡಿಸುವಂತೆ ಕೇಂದ್ರೀಯ ಮಾಹಿತಿ ಆಯೋಗ (ಸಿಐಸಿ) ಆದೇಶಿಸಿದೆ.

ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ (ಆರ್‌ಟಿಐ) ಈ ಬಗ್ಗೆ ವ್ಯಕ್ತಿಯೊಬ್ಬರು ಕೇಳಿದ ವಿವರಗಳಿಗೆ ಅಪೂರ್ಣ ಮತ್ತು ಅಸಮರ್ಪಕ ಮಾಹಿತಿ ನೀಡಲಾಗಿದೆ ಎಂದು ಸಿಐಸಿ ಅಸಮಾಧಾನ ವ್ಯಕ್ತಪಡಿಸಿದೆ. ಇದಕ್ಕಾಗಿ, ಮಾಹಿತಿ ಆಯುಕ್ತ ಸುರೇಶ್‌ ಚಂದ್ರ ಅವರು, ಆರ್ಥಿಕ ವ್ಯವಹಾರಗಳು, ಹಣಕಾಸು ಇಲಾಖೆ ಮತ್ತು ಚುನಾವಣಾ ಆಯೋಗದ ಮುಖ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಷೋಕಾಸ್‌ ನೋಟಿಸ್‌ ಜಾರಿಗೊಳಿಸಿದ್ದಾರೆ.

ಆರ್‌ಟಿಐ ಕಾರ್ಯಕರ್ತ ವೆಂಕಟೇಶ್‌ ನಾಯಕ್‌ ಅವರು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿ ರಹಸ್ಯ ಕಾಪಾಡಿರುವವರ ಕುರಿತು ಮಾಹಿತಿ ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT