<p><strong>ತಿರುವನಂತಪುರಂ:</strong> ಅಣೆಕಟ್ಟಿನ ಕಳಪೆ ನಿರ್ವಹಣೆಯಿಂದಾಗಿ ಕೇರಳದಲ್ಲಿ ಪ್ರವಾಹವುಂಟಾಗಿದ್ದು ಎಂದು ಅಮಿಕಸ್ ಕ್ಯೂರಿ (ನ್ಯಾಯಾಲಯಕ್ಕೆ ಸಹಕರಿಸುವ ವಕೀಲ) ಹೇಳಿದ್ದಾರೆ.</p>.<p>ಪ್ರಳಯಕ್ಕೆ ಕಾರಣ ಏನೆಂದು ಪತ್ತೆ ಹಚ್ಚಲು ನ್ಯಾಯಾಂಗ ತನಿಖೆ ನಡೆಸಬೇಕು. ಅಣೆಕಟ್ಟುಗಳನ್ನು ತೆರೆದು ಬಿಡುವಾಗ ಮಾನದಂಡಗಳನ್ನು ಪಾಲಿಸಿಲ್ಲ ಎಂದು ಅಮಿಕಸ್ ಕ್ಯೂರಿ ಜೇಕಬ್ ಪಿ ಅಲೆಕ್ಸ್ ಹೈಕೋರ್ಟ್ ಗೆ ಸಲ್ಲಿಸಿದ ವರದಿಯಲ್ಲಿ ಹೇಳಿದ್ದಾರೆ.</p>.<p>49 ಪುಟಗಳ ವಿಸ್ತೃತ ವರದಿ ಹೈಕೋರ್ಟ್ಗೆ ಸಲ್ಲಿಸಲಾಗಿದೆ.ಮಾನದಂಡಗಳನ್ನು ಪಾಲಿಸದೆ, ಯಾವುದೇ ಮುನ್ಸೂಚನೆಗಳನ್ನು ನೀಡದೆಯೇ ಅಣೆಕಟ್ಟಿನ ನೀರನ್ನು ಹೊರ ಹರಿಯಲು ಬಿಟ್ಟಿದ್ದು ಪ್ರಳಯ ಸಂಭವಿಸಲು ಕಾರಣವೇ? ಎಂಬುದರ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಈ ವರದಿಯಲ್ಲಿ ಹೇಳಲಾಗಿದೆ.</p>.<p>ಅಣೆಕಟ್ಟಿನಲ್ಲಿ ಕೆಸರು ಸಂಗ್ರಹವಾಗಿದ್ದರಿಂದ ನೀರು ಬೇಗನೆ ತುಂಬಿದೆ.ಅದೇ ವೇಳೆ ರಾಷ್ಟ್ರೀಯ ಹವಾಮಾನ ನಿರೀಕ್ಷಣಾ ಕೇಂದ್ರದ ವರದಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ.ಜೋರಾಗಿ ಸುರಿವ ಮಳೆಯ ಪರಿಣಾಮವನ್ನು ಎದುರಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಪ್ರಳಯವನ್ನು ನಿಭಾಯಿಸುವ ಕಾರ್ಯದಲ್ಲಿ ಸರ್ಕಾರ ಸೋತಿದೆ ಎಂಬ ಆರೋಪ ಹೊರಿಸಿ ಸಾಕಷ್ಟು ಅರ್ಜಿಗಳುಹೈಕೋರ್ಟ್ನಲ್ಲಿವೆ. ಹೀಗಾಗಿ ನ್ಯಾಯಾಲಯವು ಅಮಿಕಸ್ ಕ್ಯೂರಿ ನೇಮಕ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ:</strong> ಅಣೆಕಟ್ಟಿನ ಕಳಪೆ ನಿರ್ವಹಣೆಯಿಂದಾಗಿ ಕೇರಳದಲ್ಲಿ ಪ್ರವಾಹವುಂಟಾಗಿದ್ದು ಎಂದು ಅಮಿಕಸ್ ಕ್ಯೂರಿ (ನ್ಯಾಯಾಲಯಕ್ಕೆ ಸಹಕರಿಸುವ ವಕೀಲ) ಹೇಳಿದ್ದಾರೆ.</p>.<p>ಪ್ರಳಯಕ್ಕೆ ಕಾರಣ ಏನೆಂದು ಪತ್ತೆ ಹಚ್ಚಲು ನ್ಯಾಯಾಂಗ ತನಿಖೆ ನಡೆಸಬೇಕು. ಅಣೆಕಟ್ಟುಗಳನ್ನು ತೆರೆದು ಬಿಡುವಾಗ ಮಾನದಂಡಗಳನ್ನು ಪಾಲಿಸಿಲ್ಲ ಎಂದು ಅಮಿಕಸ್ ಕ್ಯೂರಿ ಜೇಕಬ್ ಪಿ ಅಲೆಕ್ಸ್ ಹೈಕೋರ್ಟ್ ಗೆ ಸಲ್ಲಿಸಿದ ವರದಿಯಲ್ಲಿ ಹೇಳಿದ್ದಾರೆ.</p>.<p>49 ಪುಟಗಳ ವಿಸ್ತೃತ ವರದಿ ಹೈಕೋರ್ಟ್ಗೆ ಸಲ್ಲಿಸಲಾಗಿದೆ.ಮಾನದಂಡಗಳನ್ನು ಪಾಲಿಸದೆ, ಯಾವುದೇ ಮುನ್ಸೂಚನೆಗಳನ್ನು ನೀಡದೆಯೇ ಅಣೆಕಟ್ಟಿನ ನೀರನ್ನು ಹೊರ ಹರಿಯಲು ಬಿಟ್ಟಿದ್ದು ಪ್ರಳಯ ಸಂಭವಿಸಲು ಕಾರಣವೇ? ಎಂಬುದರ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಈ ವರದಿಯಲ್ಲಿ ಹೇಳಲಾಗಿದೆ.</p>.<p>ಅಣೆಕಟ್ಟಿನಲ್ಲಿ ಕೆಸರು ಸಂಗ್ರಹವಾಗಿದ್ದರಿಂದ ನೀರು ಬೇಗನೆ ತುಂಬಿದೆ.ಅದೇ ವೇಳೆ ರಾಷ್ಟ್ರೀಯ ಹವಾಮಾನ ನಿರೀಕ್ಷಣಾ ಕೇಂದ್ರದ ವರದಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ.ಜೋರಾಗಿ ಸುರಿವ ಮಳೆಯ ಪರಿಣಾಮವನ್ನು ಎದುರಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಪ್ರಳಯವನ್ನು ನಿಭಾಯಿಸುವ ಕಾರ್ಯದಲ್ಲಿ ಸರ್ಕಾರ ಸೋತಿದೆ ಎಂಬ ಆರೋಪ ಹೊರಿಸಿ ಸಾಕಷ್ಟು ಅರ್ಜಿಗಳುಹೈಕೋರ್ಟ್ನಲ್ಲಿವೆ. ಹೀಗಾಗಿ ನ್ಯಾಯಾಲಯವು ಅಮಿಕಸ್ ಕ್ಯೂರಿ ನೇಮಕ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>