ನ್ಯಾಯಮೂರ್ತಿಗಳಾದ ಮದನ್ ಬಿ. ಲೋಕೂರ, ದೀಪಕ್ ಗುಪ್ತಾ ಹಾಗೂ ಹೇಮಂತ್ ಗುಪ್ತಾ ಅವರನ್ನು ಒಳಗೊಂಡ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ‘ರಸ್ತೆ ಗುಂಡಿಗಳಿಂದ ಸಾವಿಗೀಡಾಗುವುದು, ಭಯೋತ್ಪಾದಕರಿಂದ ಹತ್ಯೆಗೀಡಾಗುವುದಕ್ಕಿಂತಲೂ ದಾರುಣ’ ಎಂದಿದೆ. ಅಲ್ಲದೆ, ಈ ಕುರಿತು ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.