ತಕ್ಷಣವೇ ಮಧ್ಯಪ್ರವೇಶಿಸಿದ ಸ್ಪೀಕರ್, ಏನು ಹೇಳಬೇಕೆಂದು ಸಭೆಯಲ್ಲಿ ನಿರ್ಧಾರ ಆಗಿದೆಯೋ ಅಷ್ಟು ಹೇಳುವಂತೆ ತಾಕೀತು ಮಾಡಿ
ದರು. ಅದಕ್ಕೂ ಮೊದಲು, ಪ್ರಜ್ಞಾ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷಗಳ ಸದಸ್ಯರು ಭಾರಿ ಗದ್ದಲ ನಡೆಸಿದರು. ಅವರು ಕ್ಷಮೆ ಕೇಳಿದರೂ, ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳುತ್ತಲೇ ಇದ್ದರು. ನ್ಯಾಯಾಲಯವು ದೋಷಮುಕ್ತಗೊಳಿಸಿದ್ದರೂ ರಾಹುಲ್ ಗಾಂಧಿ ತಮ್ಮನ್ನು ಭಯೋತ್ಪಾದಕಿ ಎಂದು ಕರೆದಿದ್ದಾರೆ ಎಂದು ಹೇಳಿದರು.