<p><strong>ಮುಂಬೈ:</strong> ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ನಾಯಕರಾದ ಸಂಬಾಜಿ ಭಿಡೆ ಹಾಗೂ ಮಿಲಿಂದ್ ಏಕಬೋಟೆ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂಬುದರ ಬಗ್ಗೆ ತನಿಖೆ ನಡೆಸಬೇಕೆಂದು ವಂಚಿತ್ ಬಹುಜನ ಅಗಾಡಿ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಗುರುವಾರ ಆಗ್ರಹಿಸಿದ್ದಾರೆ.</p>.<p>‘ರಾಜಕೀಯ ಕಾರಣಕ್ಕಾಗಿ ಅವರನ್ನು ರಕ್ಷಿಸಲಾಗಿಯೇ? ಈ ಬಗ್ಗೆ ತನಿಖೆ ನಡೆಯಲಿ’ ಎಂದು ಅವರು ಒತ್ತಾಯಿಸಿದ್ದಾರೆ.</p>.<p>‘ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಶೀಘ್ರ ಭೇಟಿಯಾಗಲಿದ್ದೇನೆ’ ಎಂದೂ ತಿಳಿಸಿದ್ದಾರೆ.</p>.<p>ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಶಿವಪ್ರತಿಷ್ಠಾನ ಹಿಂದೂಸ್ಥಾನ ಸಂಸ್ಥಾಪಕ ಸಂಬಾಜಿ ಭಿಡೆ ಮತ್ತು ಸಮಸ್ತ ಹಿಂದೂ ಅಗಾಡಿ ಸಂಸ್ಥಾಪಕ ಮಿಲಿಂದ್ ಏಕಬೋಟೆ ವಿರುದ್ಧ ಪ್ರಕರಣ ದಾಖಲಾಗಿತ್ತು.</p>.<p>ಬಂಧನಕ್ಕೊಳಗಾಗಿದ್ದ ಏಕಬೋಟೆ ಜಾಮೀನಿನಲ್ಲಿ ಹೊರ ಬಂದಿದ್ದಾರೆ. ಪ್ರಕರಣದಲ್ಲಿ ಸಂಬಾಜಿ ಪಾತ್ರ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಹೇಳಿದ್ದರು.</p>.<p>ಪ್ರಕರಣದ ವಿಚಾರಣೆಯನ್ನು ವಿಶೇಷ ತನಿಖಾ ದಳಕ್ಕೆ ಒಪ್ಪಿಸಬೇಕು ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಈಚೆಗೆ ಉದ್ಧವ್ ಠಾಕ್ರೆ ಅವರನ್ನು ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ನಾಯಕರಾದ ಸಂಬಾಜಿ ಭಿಡೆ ಹಾಗೂ ಮಿಲಿಂದ್ ಏಕಬೋಟೆ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂಬುದರ ಬಗ್ಗೆ ತನಿಖೆ ನಡೆಸಬೇಕೆಂದು ವಂಚಿತ್ ಬಹುಜನ ಅಗಾಡಿ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಗುರುವಾರ ಆಗ್ರಹಿಸಿದ್ದಾರೆ.</p>.<p>‘ರಾಜಕೀಯ ಕಾರಣಕ್ಕಾಗಿ ಅವರನ್ನು ರಕ್ಷಿಸಲಾಗಿಯೇ? ಈ ಬಗ್ಗೆ ತನಿಖೆ ನಡೆಯಲಿ’ ಎಂದು ಅವರು ಒತ್ತಾಯಿಸಿದ್ದಾರೆ.</p>.<p>‘ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಶೀಘ್ರ ಭೇಟಿಯಾಗಲಿದ್ದೇನೆ’ ಎಂದೂ ತಿಳಿಸಿದ್ದಾರೆ.</p>.<p>ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಶಿವಪ್ರತಿಷ್ಠಾನ ಹಿಂದೂಸ್ಥಾನ ಸಂಸ್ಥಾಪಕ ಸಂಬಾಜಿ ಭಿಡೆ ಮತ್ತು ಸಮಸ್ತ ಹಿಂದೂ ಅಗಾಡಿ ಸಂಸ್ಥಾಪಕ ಮಿಲಿಂದ್ ಏಕಬೋಟೆ ವಿರುದ್ಧ ಪ್ರಕರಣ ದಾಖಲಾಗಿತ್ತು.</p>.<p>ಬಂಧನಕ್ಕೊಳಗಾಗಿದ್ದ ಏಕಬೋಟೆ ಜಾಮೀನಿನಲ್ಲಿ ಹೊರ ಬಂದಿದ್ದಾರೆ. ಪ್ರಕರಣದಲ್ಲಿ ಸಂಬಾಜಿ ಪಾತ್ರ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಹೇಳಿದ್ದರು.</p>.<p>ಪ್ರಕರಣದ ವಿಚಾರಣೆಯನ್ನು ವಿಶೇಷ ತನಿಖಾ ದಳಕ್ಕೆ ಒಪ್ಪಿಸಬೇಕು ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಈಚೆಗೆ ಉದ್ಧವ್ ಠಾಕ್ರೆ ಅವರನ್ನು ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>