ಗುರುವಾರ ಕೇರಳ ವಿಧಾನಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ಅವರು, ‘ಸ್ವಯಂಸೇವಾ ಸಂಸ್ಥೆಗಳ ಸಹಾಯದಿಂದ ಈ ಯೋಜನೆಯನ್ನು ಕಾರ್ಯಗತ ಗೊಳಿಸಲಾಗುವುದು. ಅಂತರ್ಜಾತಿ ಅಥವಾ ಅಂತರ ಧರ್ಮೀಯ ವಿವಾಹವಾಗಿರುವ ಸಾಮಾನ್ಯ ವರ್ಗದದಂಪತಿಗೆ ಇಲಾಖೆಯ ವತಿಯಿಂದ ₹30,000 ಹಾಗೂ ದಂಪತಿಯಲ್ಲಿ ಯಾರಾದರೊಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದವರಾಗಿದ್ದರೆ ಅಂಥವರಿಗೆ ₹75,000 ನೆರವು ನೀಡುವ ಯೋಜನೆ ಈಗಾಗಲೇ ಜಾರಿಯಲ್ಲಿದೆ. ಇಂಥ ದಂಪತಿ ಸರ್ಕಾರಿ ಉದ್ಯೋಗದಲ್ಲಿದ್ದರೆ, ವರ್ಗಾವಣೆಯ ಸಂದರ್ಭದಲ್ಲಿ ಅವರನ್ನು ವಿಶೇಷ ಆದ್ಯತೆ ಎಂದು ಪರಿಗಣಿಸಲಾಗುವುದು. ಆದರೆ ಉದ್ಯೋಗದಲ್ಲಿ ಮೀಸಲಾತಿ ನೀಡಲು ಅವಕಾಶಗಳಿಲ್ಲ’ ಎಂದರು.