ಜಾಗತಿಕ ಆರ್ಥಿಕ ಸ್ಥಿತಿಗತಿ ಹಾಗೂ ದೇಶದ ಆರ್ಥಿಕತೆ ಕುರಿತು ಹಲವಾರು ನಿರೀಕ್ಷೆಗಳನ್ನು ಹುಟ್ಟುಹಾಕಿರುವ 2020-21 ಸಾಲಿನ ಕೇಂದ್ರ ಬಜೆಟ್ ಅಧಿವೇಶನಕ್ಕೆ ಶುಕ್ರವಾರ ಚಾಲನೆ ದೊರೆತಿದ್ದು, ರಾಷ್ಟ್ರಪತಿ ಕೋವಿಂದ್ ಅವರು ತಮ್ಮ ಬಜೆಟ್-ಪೂರ್ವ ಭಾಷಣದಲ್ಲಿ ಪೌರತ್ವ ಕಾಯ್ದೆಯ ತಿದ್ದುಪಡಿಯನ್ನು ಐತಿಹಾಸಿಕ ಎಂದು ಬಣ್ಣಿಸಿದಾಗ ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳು ಬಲವಾಗಿ ವಿರೋಧಿಸಿದವು.