ಇದಕ್ಕೂ ಮೊದಲು ಉಳಿದ ಮೂವರು ಅಪರಾಧಿಗಳಾದ ಮುಖೇಶ್, ವಿನಯ್ ಹಾಗೂ ಅಕ್ಷಯ್ ಸಲ್ಲಿಸಿದ್ದ ದಯಾ ಅರ್ಜಿಗಳನ್ನು ಸಹ ರಾಷ್ಟ್ರಪತಿ ತಿರಸ್ಕರಿಸಿದ್ದರು. ಪವನ್ ಮಾರ್ಚ್ 2ರಂದು ರಾಷ್ಟ್ರಪತಿಗೆ ದಯಾ ಅರ್ಜಿ ಸಲ್ಲಿಸಿದ್ದರಿಂದ ಮಾರ್ಚ್ 3ರ ಬೆಳಗ್ಗೆ 6 ಗಂಟೆಗೆ ಜಾರಿಯಾಗಬೇಕಿದ್ದ ಗಲ್ಲುಶಿಕ್ಷೆಯನ್ನು ಮೂರನೇ ಬಾರಿಗೆ ಮುಂದೂಡಲಾಗಿತ್ತು.