ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

56 ಗಣ್ಯರಿಗೆ ಪದ್ಮ ಪ್ರಶಸ್ತಿ ಇಂದು

Last Updated 10 ಮಾರ್ಚ್ 2019, 19:38 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಪ್ರತಿಷ್ಠಿತ ಪ್ರಶಸ್ತಿ ಪದ್ಮ ಪುರಸ್ಕಾರಕ್ಕೆ ಈ ಬಾರಿ ಆಯ್ಕೆಯಾಗಿರುವ 112 ಮಂದಿ ಸಾಧಕರ ಪೈಕಿ 56 ಗಣ್ಯರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ರಾಷ್ಟ್ರಪತಿ ಭವನದಲ್ಲಿಸೋಮವಾರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ನಟ ಖಾದರ್‌ ಖಾನ್‌ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ, ಅಕಾಲಿದಳ ನಾಯಕ ಸುಖದೇವ್‌ ಸಿಂಗ್‌ ದಿಂಡ್ಸಾ ಮತ್ತು ಹಿರಿಯ ಪತ್ರಕರ್ತ ಕುಲದೀಪ್‌ ನಯ್ಯರ್‌ ಅವರಿಗೆ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ರಂಗಕರ್ಮಿ ಬಾಬಾಸಾಹೇಬ್‌ ಪುರಂದರೆ ಯಾನೆ ಬಲ್ವಂತ್‌ ಮೊರೇಶ್ವರ್‌ ಪುರಂದರೆ (ಪದ್ಮವಿಭೂಷಣ), ಬಿಹಾರದ ಹುಕುಂದೇವ್‌ ನಾರಾಯಣ್‌ ಯಾದವ್‌ (ಪದ್ಮಭೂಷಣ), ತಂತ್ರಜ್ಞಾನ ಕ್ಷೇತ್ರ ದೈತ್ಯ ಬಹುರಾಷ್ಟ್ರೀಯ ಕಂಪನಿ ಸಿಸ್ಕೊ ಸಿಸ್ಟಮ್‌ನ ಸಿಇಒ ಜಾನ್‌ ಛೇಂಬರ್ಸ್‌, ಹೆಸರಾಂತ ಡಾನ್ಸರ್‌ ಮತ್ತು ನಟ ಪ್ರಭುದೇವ್‌ (ಪದ್ಮಶ್ರೀ) ಅವರನ್ನೂ ರಾಷ್ಟ್ರಪತಿ ಗೌರವಿಸಲಿದ್ದಾರೆ. ಈ ಸಮಾರಂಭದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.

ಅವರು ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ ಸಾಧಕರು ಮತ್ತು ಅವರ ಕುಟುಂಬದ ಸದಸ್ಯರೊಂದಿಗೆ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಭಾನುವಾರ ಸಂವಾದ ನಡೆಸಿದರು.

ಮಾರ್ಚ್‌ 16ರಂದು ನಡೆಯುವ ಮತ್ತೊಂದು ಸಮಾರಂಭದಲ್ಲಿ ಉಳಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಕಟಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT