<p><strong>ನವದೆಹಲಿ: </strong>ದೆಹಲಿ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಆಕ್ಷಯ್ ಕುಮಾರ್ ಸಿಂಗ್ ಎಂಬಾತ ಸಲ್ಲಿಸಿದ್ದ ಕ್ಷಮಾದಾನದ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಬುಧವಾರ ತಿರಸ್ಕರಿಸಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.</p>.<p>ಪ್ರಕರಣದ ಇನ್ನಿತರ ಅಪರಾಧಿಗಳಾದ ಮುಖೇಶ್ ಸಿಂಗ್ ಮತ್ತು ವಿನಯ್ ಕುಮಾರ್ ಶರ್ಮಾ ಅವರ ಕ್ಷಮಾದಾನದ ಅರ್ಜಿಯನ್ನೂ ರಾಷ್ಟ್ರಪತಿಗಳು ಈಗಾಗಲೇ ತಿರಸ್ಕರಿಸಿದ್ದಾರೆ. ಅಕ್ಷಯ್ ಕುಮಾರ್ ಸಿಂಗ್ ಇತ್ತೀಚೆಗೆ ತಾನೂ ಪ್ರತ್ಯೇಕವಾಗಿಅರ್ಜಿಸಲ್ಲಿಸಿದ್ದ. ಆದರೆ, ಅದನ್ನುರಾಷ್ಟ್ರಪತಿಗಳು ತಳ್ಳಿಹಾಕಿದ್ದಾರೆ. </p>.<p>ಈ ಮಧ್ಯೆ ಅಪರಾಧಿಗಳನ್ನು ಪ್ರತ್ಯೇಖವಾಗಿ ಗಲ್ಲಿಗೇರಿಸಲು ಅವಕಾಶವಿಲ್ಲ ಎಂಬ ದೆಹಲಿ ಹೈಕೋರ್ಟ್ನ ಬುಧವಾರದ ತೀರ್ಪನ್ನು ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಗಳು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿವೆ.</p>.<p>ಅಪರಾಧಿಗಳು ಕಾನೂನಿನ ಮಾರ್ಗಗಳನ್ನು ಪ್ರತ್ಯೇಕವಾಗಿ ಪ್ರಯೋಗಿಸುತ್ತಾ, ಶಿಕ್ಷೆ ವಿಳಂಬವಾಗುವಂತೆ ನೋಡಿಕೊಳ್ಳುತ್ತಿದ್ದಾರೆಎಂಬ ವಾದ ಕೇಳಿ ಬಂದಿದೆ. ಕೋರ್ಟ್ ಕೂಡ ಈ ವಾದವನ್ನು ನಿರ್ವಿವಾದ ಎಂದು ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೆಹಲಿ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಆಕ್ಷಯ್ ಕುಮಾರ್ ಸಿಂಗ್ ಎಂಬಾತ ಸಲ್ಲಿಸಿದ್ದ ಕ್ಷಮಾದಾನದ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಬುಧವಾರ ತಿರಸ್ಕರಿಸಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.</p>.<p>ಪ್ರಕರಣದ ಇನ್ನಿತರ ಅಪರಾಧಿಗಳಾದ ಮುಖೇಶ್ ಸಿಂಗ್ ಮತ್ತು ವಿನಯ್ ಕುಮಾರ್ ಶರ್ಮಾ ಅವರ ಕ್ಷಮಾದಾನದ ಅರ್ಜಿಯನ್ನೂ ರಾಷ್ಟ್ರಪತಿಗಳು ಈಗಾಗಲೇ ತಿರಸ್ಕರಿಸಿದ್ದಾರೆ. ಅಕ್ಷಯ್ ಕುಮಾರ್ ಸಿಂಗ್ ಇತ್ತೀಚೆಗೆ ತಾನೂ ಪ್ರತ್ಯೇಕವಾಗಿಅರ್ಜಿಸಲ್ಲಿಸಿದ್ದ. ಆದರೆ, ಅದನ್ನುರಾಷ್ಟ್ರಪತಿಗಳು ತಳ್ಳಿಹಾಕಿದ್ದಾರೆ. </p>.<p>ಈ ಮಧ್ಯೆ ಅಪರಾಧಿಗಳನ್ನು ಪ್ರತ್ಯೇಖವಾಗಿ ಗಲ್ಲಿಗೇರಿಸಲು ಅವಕಾಶವಿಲ್ಲ ಎಂಬ ದೆಹಲಿ ಹೈಕೋರ್ಟ್ನ ಬುಧವಾರದ ತೀರ್ಪನ್ನು ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಗಳು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿವೆ.</p>.<p>ಅಪರಾಧಿಗಳು ಕಾನೂನಿನ ಮಾರ್ಗಗಳನ್ನು ಪ್ರತ್ಯೇಕವಾಗಿ ಪ್ರಯೋಗಿಸುತ್ತಾ, ಶಿಕ್ಷೆ ವಿಳಂಬವಾಗುವಂತೆ ನೋಡಿಕೊಳ್ಳುತ್ತಿದ್ದಾರೆಎಂಬ ವಾದ ಕೇಳಿ ಬಂದಿದೆ. ಕೋರ್ಟ್ ಕೂಡ ಈ ವಾದವನ್ನು ನಿರ್ವಿವಾದ ಎಂದು ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>