ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಬಿರುಸಿನ ಪ್ರಚಾರ

Last Updated 9 ಮೇ 2019, 18:12 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದ ಪೂರ್ವ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಭಾಗದಲ್ಲಿ ಬಿಜೆಪಿ 27 ಕ್ಷೇತ್ರಗಳಲ್ಲಿ ಗೆದ್ದಿತ್ತು. ಇಲ್ಲಿನ ಪ್ರಾಬಲ್ಯವನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯ. ಹಾಗಾಗಿ ಬಿಜೆಪಿ ತನ್ನ ಅತ್ಯಂತ ಪರಿಣಾಮಕಾರಿ ನಾಯಕ ಮೋದಿ ಅವರನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲು ನಿರ್ಧರಿಸಿದೆ.

ಆಜಂಗಡ, ಜಾನ್‌ಪುರ ಮತ್ತು ಪ್ರಯಾಗರಾಜ್‌ನಲ್ಲಿ ಮೋದಿ ಅವರು ಗುರುವಾರ ಪ್ರಚಾರ ನಡೆಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಈ ಭಾಗದಲ್ಲಿ ಆರೇಳು ರ್‍ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ.

ಗಾಜಿಪುರದಲ್ಲಿ ಶನಿವಾರ, ದೇವರಿಯಾದಲ್ಲಿ ಭಾನುವಾರ ಮೋದಿ ಅವರ ಸಮಾವೇಶ ನಿಗದಿಯಾಗಿದೆ. ಕುಷಿನಗರ, ಚಂದೌಲಿ, ಬಲಿಯಾ ಮತ್ತು ಘೋಸಿ ಲೋಕಸಭಾ ಕ್ಷೇತ್ರಗಳಲ್ಲಿಯೂ ಮೋದಿ ಅವರು ಪ್ರಚಾರ ಭಾಷಣ ಮಾಡುವ ನಿರೀಕ್ಷೆ ಇದೆ. ಈ ಭಾಗದಲ್ಲಿ ಕೊನೆಯ ಹಂತದಲ್ಲಿ ಅಂದರೆ ಮೇ 19ರಂದು ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT