<p><strong>ನವದೆಹಲಿ: </strong>ಇಂದು ಬೆಳಿಗ್ಗೆ ನಡೆದ ಬಿಜೆಪಿ ಸಂಸದರ ಸಭೆಯಲ್ಲಿ ಪ್ರಧಾನಿ ಮೋದಿ ಶಾಂತಿ, ಸಾಮರಸ್ಯ ಮತ್ತು ಐಕ್ಯತೆಯ ಮಂತ್ರ ಪಠಿಸಿದ್ದಾರೆ.</p>.<p>ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಅವರು ರಾಷ್ಟ್ರದ ಅಭಿವೃದ್ಧಿಗಾಗಿ ಈ ಮೌಲ್ಯಗಳು ಅವಶ್ಯಕವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>ಅಭಿವೃದ್ಧಿಯೇ ತಮ್ಮ ಪಕ್ಷದ ಮಂತ್ರವೆಂದು ಪ್ರತಿಪಾದಿಸಿದ ಅವರು ಮೌಲ್ಯಗಳನ್ನು ಅನುಸರಿಸಬೇಕೆಂದು ಪಕ್ಷದ ಮುಖಂಡರಿಗೆ ಕರೆ ನೀಡಿದ್ದಾರೆ.</p>.<p>‘ದೇಶದ ಅಭಿವೃದ್ಧಿಗೆ ಶಾಂತಿ, ಸಾಮರಸ್ಯ ಮತ್ತು ಐಕ್ಯತೆ ಅಗತ್ಯ. ಆದರೆ, ಕೆಲವರು ತಮ್ಮ ಪಕ್ಷಗಳಿಗಾಗಿ ಬದುಕುತ್ತಿದ್ದಾರೆ. ನಾವು ದೇಶಕ್ಕಾಗಿ ಬದುಕುತ್ತೇವೆ’ ಎಂದು ಪ್ರಧಾನಿ ಹೇಳಿದ್ದಾರೆ.</p>.<p>ಕೆಲ ಬಿಜೆಪಿ ನಾಯಕರ ದ್ವೇಷದ ಭಾಷಣಗಳು ಜನರನ್ನು ಪ್ರಚೋದಿಸುತ್ತಿವೆ ಎಂಬ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಶಾಂತಿ ಮಂತ್ರ ಪಠಿಸಿದ್ದು ಮಹತ್ವ ಪಡೆದುಕೊಂಡಿದೆ.</p>.<p>ಸಿಎಎ ಪರ–ವಿರೋಧ ಗುಂಪುಗಳ ನಡುವೆ ಕಳೆದ ವಾರ ರಾಷ್ಟ್ರ ರಾಜಧಾನಿಯಲ್ಲಿ ಆರಂಭವಾದ ಸಂಘರ್ಷ ಈಶಾನ್ಯ ದೆಹಲಿಯಲ್ಲಿ ದೊಡ್ಡ ದುರಂತವನ್ನೇ ಸೃಷ್ಟಿಸಿತ್ತು. ಹಿಂಸಾಚಾರದಲ್ಲಿ 47 ಜನರು ಪ್ರಾಣ ಕಳೆದುಕೊಂಡಿದ್ದರು. ನೂರಾರು ಮಂದಿಗೆ ಗಾಯಗಳಾಗಿದ್ದವು. ಆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಸಾಮರಸ್ಯ ಮತ್ತು ಐಕ್ಯತೆಯ ಬಗ್ಗೆ ಮಾತನಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಇಂದು ಬೆಳಿಗ್ಗೆ ನಡೆದ ಬಿಜೆಪಿ ಸಂಸದರ ಸಭೆಯಲ್ಲಿ ಪ್ರಧಾನಿ ಮೋದಿ ಶಾಂತಿ, ಸಾಮರಸ್ಯ ಮತ್ತು ಐಕ್ಯತೆಯ ಮಂತ್ರ ಪಠಿಸಿದ್ದಾರೆ.</p>.<p>ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಅವರು ರಾಷ್ಟ್ರದ ಅಭಿವೃದ್ಧಿಗಾಗಿ ಈ ಮೌಲ್ಯಗಳು ಅವಶ್ಯಕವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>ಅಭಿವೃದ್ಧಿಯೇ ತಮ್ಮ ಪಕ್ಷದ ಮಂತ್ರವೆಂದು ಪ್ರತಿಪಾದಿಸಿದ ಅವರು ಮೌಲ್ಯಗಳನ್ನು ಅನುಸರಿಸಬೇಕೆಂದು ಪಕ್ಷದ ಮುಖಂಡರಿಗೆ ಕರೆ ನೀಡಿದ್ದಾರೆ.</p>.<p>‘ದೇಶದ ಅಭಿವೃದ್ಧಿಗೆ ಶಾಂತಿ, ಸಾಮರಸ್ಯ ಮತ್ತು ಐಕ್ಯತೆ ಅಗತ್ಯ. ಆದರೆ, ಕೆಲವರು ತಮ್ಮ ಪಕ್ಷಗಳಿಗಾಗಿ ಬದುಕುತ್ತಿದ್ದಾರೆ. ನಾವು ದೇಶಕ್ಕಾಗಿ ಬದುಕುತ್ತೇವೆ’ ಎಂದು ಪ್ರಧಾನಿ ಹೇಳಿದ್ದಾರೆ.</p>.<p>ಕೆಲ ಬಿಜೆಪಿ ನಾಯಕರ ದ್ವೇಷದ ಭಾಷಣಗಳು ಜನರನ್ನು ಪ್ರಚೋದಿಸುತ್ತಿವೆ ಎಂಬ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಶಾಂತಿ ಮಂತ್ರ ಪಠಿಸಿದ್ದು ಮಹತ್ವ ಪಡೆದುಕೊಂಡಿದೆ.</p>.<p>ಸಿಎಎ ಪರ–ವಿರೋಧ ಗುಂಪುಗಳ ನಡುವೆ ಕಳೆದ ವಾರ ರಾಷ್ಟ್ರ ರಾಜಧಾನಿಯಲ್ಲಿ ಆರಂಭವಾದ ಸಂಘರ್ಷ ಈಶಾನ್ಯ ದೆಹಲಿಯಲ್ಲಿ ದೊಡ್ಡ ದುರಂತವನ್ನೇ ಸೃಷ್ಟಿಸಿತ್ತು. ಹಿಂಸಾಚಾರದಲ್ಲಿ 47 ಜನರು ಪ್ರಾಣ ಕಳೆದುಕೊಂಡಿದ್ದರು. ನೂರಾರು ಮಂದಿಗೆ ಗಾಯಗಳಾಗಿದ್ದವು. ಆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಸಾಮರಸ್ಯ ಮತ್ತು ಐಕ್ಯತೆಯ ಬಗ್ಗೆ ಮಾತನಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>