ಅಮೇಠಿ (ಪಿಟಿಐ): ‘ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.
‘ಪಕ್ಷ ಸಂಘಟನೆಯೇ ನನ್ನ ಮೊದಲ ಆದ್ಯತೆ. ಪಕ್ಷದ ಕೆಲಸಗಳು ಸಾಕಷ್ಟಿವೆ. ಆದರೆ, ಪಕ್ಷ ನಿರ್ದೇಶನ ನೀಡಿದರೆ ಸ್ಪರ್ಧಿಸುವುದು ಖಚಿತ’ ಎಂದು ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ದೇಶ ಉಳಿಸಲು ಈ ಬಾರಿ ಚುನಾವಣೆ ನಡೆಯುತ್ತಿದೆ ಎಂದು ಮತದಾರರಿಗೆ ಮನವರಿಕೆ ಮಾಡುವಂತೆ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದೇನೆ. ಪ್ರತಿಯೊಂದು ಮನೆಗೂ ಭೇಟಿ ನೀಡಲು ಸೂಚಿಸಲಾಗಿದೆ’ ಎಂದು ತಿಳಿಸಿದರು.
‘ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದುಕೊಳ್ಳುತ್ತದೆ. ಭರವಸೆ ನೀಡಿದಂತೆ ಸಾಲ ಮನ್ನಾ ಮಾಡಿರುವುದು ಇದಕ್ಕೆ ಸಾಕ್ಷಿ’ ಎಂದರು.