ನವದೆಹಲಿ: ಕೋವಿಡ್–19ರಿಂದ ಉತ್ತರ ಪ್ರದೇಶದಲ್ಲಿ ಕಳೆದ 48 ಗಂಟೆಗಳಲ್ಲಿ 28 ಮಂದಿ ಸತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ನೇತೃತ್ವದ ಸರ್ಕಾರದ ಕಾರ್ಯವೈಖರಿಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.
ಕೋವಿಡ್ ನಿರ್ವಹಣೆ ಕುರಿತಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನಿರ್ಲಕ್ಷ್ಯ ಹೀಗೇ ಮುಂದುವರೆದರೆ, ಪರಿಸ್ಥಿತಿ ಇನ್ನಷ್ಟು ಗಂಭೀರವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ಈ ಕುರಿತು ಟ್ವೀಟ್ನಲ್ಲಿ ಅವರು, ಉತ್ತರ ಪ್ರದೇಶ ಸರ್ಕಾರಕ್ಕೆ ಈ ಬೆಳವಣಿಗೆ ನಾಚಿಕೆಗೇಡಿನದು. ಅಪಪ್ರಚಾರದ ಮೂಲಕ ಸರ್ಕಾರ ಸತ್ಯವನ್ನು ಮರೆಮಾಚುತ್ತಿದೆ ಎಂದು ಆರೋಪಿಸಿದ್ದಾರೆ.
..अगर यूपी सरकार सच दबाकर कोरोना मामले में इसी तरह लगातार लापरवाही करती रही तो बहुत घातक होने वाला है। 2/2
— Priyanka Gandhi Vadra (@priyankagandhi) June 22, 2020