ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಣಸಿಯಿಂದ ಸ್ಪರ್ಧೆ: ಮೌನ ಮುರಿದ ಪ್ರಿಯಾಂಕಾ

Last Updated 30 ಏಪ್ರಿಲ್ 2019, 19:53 IST
ಅಕ್ಷರ ಗಾತ್ರ

ಅಮೇಠಿ: ಮೋದಿ ವಿರುದ್ಧ ವಾರಾಣಸಿಯಿಂದ ಸ್ಪರ್ಧಿಸದಿರುವ ನಿರ್ಧಾರ ಯಾಕೆ ಕೈಗೊಳ್ಳಲಾಯಿತು ಎಂಬ ಬಗ್ಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಇದೇ ಮೊದಲಿಗೆ ಮಾತನಾಡಿದ್ದಾರೆ. ‘41 ಕ್ಷೇತ್ರಗಳನ್ನು ನೋಡಿಕೊಳ್ಳುವ ಹೊಣೆ ಇದೆ. ಹಾಗಾಗಿ ಒಂದು ಕ್ಷೇತ್ರದ ಮೇಲೆ ಗಮನ ಕೇಂದ್ರೀಕರಿಸಲು ಸಾಧ್ಯವಾಗದು’ ಎಂದು ಅವರು ಕಾರಣ ಕೊಟ್ಟಿದ್ದಾರೆ.

‘ನಾನು ಹಿಂದೆ ಸರಿದದ್ದಲ್ಲ. ಪಕ್ಷದ ಎಲ್ಲ ಹಿರಿಯ ಮುಖಂಡರ ಸಲಹೆ ಕೇಳಿದೆ. ಉತ್ತರ ಪ್ರದೇಶದಲ್ಲಿ ನನ್ನ ಜತೆಗೆ ಕೆಲಸ ಮಾಡುವ ಸಹೋದ್ಯೋಗಿಗಳ ಅಭಿಪ್ರಾಯ ಪಡೆದುಕೊಂಡೆ. ನನಗೆ 41 ಕ್ಷೇತ್ರನೋಡಿಕೊಳ್ಳುವ ಹೊಣೆ ಇದೆ ಎಂದು ಅವರು ದೃಢವಾಗಿ ಹೇಳಿದರು’ ಎಂದು ತಿಳಿಸಿದ್ದಾರೆ.

‘ಎಲ್ಲ ಅಭ್ಯರ್ಥಿಗಳೂ ಅವರವರ ಕ್ಷೇತ್ರಗಳಲ್ಲಿ ನಾನು ಪ್ರಚಾರಕ್ಕೆ ಹೋಗಬೇಕು ಎಂದು ಬಯಸುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT