ಅಮೇಠಿ: ಮೋದಿ ವಿರುದ್ಧ ವಾರಾಣಸಿಯಿಂದ ಸ್ಪರ್ಧಿಸದಿರುವ ನಿರ್ಧಾರ ಯಾಕೆ ಕೈಗೊಳ್ಳಲಾಯಿತು ಎಂಬ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಇದೇ ಮೊದಲಿಗೆ ಮಾತನಾಡಿದ್ದಾರೆ. ‘41 ಕ್ಷೇತ್ರಗಳನ್ನು ನೋಡಿಕೊಳ್ಳುವ ಹೊಣೆ ಇದೆ. ಹಾಗಾಗಿ ಒಂದು ಕ್ಷೇತ್ರದ ಮೇಲೆ ಗಮನ ಕೇಂದ್ರೀಕರಿಸಲು ಸಾಧ್ಯವಾಗದು’ ಎಂದು ಅವರು ಕಾರಣ ಕೊಟ್ಟಿದ್ದಾರೆ.