ಉತ್ತರ ಪ್ರದೇಶದಲ್ಲಿ ಮಹಿಳೆಯರು, ಮಕ್ಕಳಿಗೆ ರಕ್ಷಣೆಯಿಲ್ಲ: ಪ್ರಿಯಾಂಕಾ ಗುಡುಗು

ನವದೆಹಲಿ: ಉತ್ತರ ಪ್ರದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಎಐಸಿಸಿಯ ಪ್ರಧಾನ ಕಾರ್ದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಮಹಿಳೆಯರು ಮತ್ತು ಮಕ್ಕಳ ಭದ್ರತೆಗೆ ಉತ್ತರ ಪ್ರದೇಶ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಜವಾಬ್ದಾರಿಯನ್ನು ಕೂಡಲೇ ಹೊರಬೇಕು ಎಂದೂ ಪ್ರಿಯಾಂಕಾ ಆಗ್ರಹಿಸಿದ್ದಾರೆ.
‘ನರಭಕ್ಷಕರು ಅಮಾಯಕರನ್ನು ಕಿತ್ತು ತಿನ್ನುವ ಪರಿಸ್ಥಿತಿ ಉತ್ತರ ಪ್ರದೇಶದಲ್ಲಿ ಸೃಷ್ಟಿಯಾಗಿದೆ. ಮಹಿಳೆಯರು ಭಯದ ವಾತಾವರಣಕ್ಕೆ ದೂಡಲ್ಪಟ್ಟಿದ್ದಾರೆ. ಮಾನವರನ್ನು ಜೀವಂತವಾಗಿ ಸುಡಲಾಗುತ್ತಿದೆ. ಆದರೆ, ಸರ್ಕಾರ ಅತ್ತ ನೋಡುತ್ತಲೇ ಇಲ್ಲ. ಮಹಿಳೆಯರು ಮತ್ತು ಮಕ್ಕಳ ಭದ್ರತೆಯ ಜವಾಬ್ದಾರಿಯನ್ನು ಸರ್ಕಾರ ಯಾವಾಗ ಹೊರಲಿದೆ?’ ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.
उप्र में मासूमों पर दरिंदगी की जा रही है। औरतों को खौफ़ के माहौल में ढकेला जा रहा है। आदमी को जिंदा जला दिया जा रहा है। मगर सत्ता की राग दरबारी आँखें कुछ नहीं देख रही हैं। उप्र सरकार औरतों और बच्चियों की सुरक्षा की जिम्मेदारी कब लेना शुरू करेगी? pic.twitter.com/SCmwkGpXlD
— Priyanka Gandhi Vadra (@priyankagandhi) June 20, 2019
ಉತ್ತರ ಪ್ರದೇಶದಲ್ಲಿ ನಡೆದ ಹಿಂಸಾಚಾರಗಳ ಕುರಿತು ಪ್ರಕಟವಾದ ವರದಿಗಳ ಶೀರ್ಷಿಗಳ ಟ್ವಿಟರ್ನಲ್ಲಿ ಪ್ರಕಟಿಸುವ ಮೂಲಕ ಪ್ರಿಯಾಂಕಾ ಮೇಲಿನಂತೆ ಮಾತನಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ಅತ್ಯಾಚಾರದಂಥ ಪ್ರಕರಣಗಳು ನಿತ್ಯ ವರದಿಯಾಗುತ್ತಿವೆ. ಇತ್ತೀಚೆಗಷ್ಟೇ ನಾಲ್ವರು ದುಷ್ಕರ್ಮಿಗಳು ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಎದುರೇ ಅತ್ಯಾಚಾರ ಮಾಡಿದ್ದರು. ಇಂಥ ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರಿಯಾಂಕಾ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.