<p><strong>ನವದೆಹಲಿ</strong>: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ವಾದ್ರಾರಾಜಕೀಯದಲ್ಲಿ ಸಕ್ರಿಯವಾಗಿದ್ದಾರೆ.ಬುಧವಾರ ಪ್ರಿಯಾಂಕಾ ಅವರನ್ನುಉತ್ತರ ಪ್ರದೇಶದ ಪೂರ್ವ ವಿಭಾಗದಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಆಗಿ ಕಾಂಗ್ರೆಸ್ ನೇಮಕ ಮಾಡಿದೆ.</p>.<p>ಫೆಬ್ರುವರಿ ಮೊದಲ ವಾರ ಪ್ರಿಯಾಂಕಾ ಅಧಿಕಾರ ಸ್ವೀಕರಿಸಲಿದ್ದಾರೆ.ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ.</p>.<p>80 ಲೋಕಸಭಾ ಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಗೆಲುವು ಸಾಧಿಸಲೇ ಬೇಕಾದ ಅನಿವಾರ್ಯ ಪರಿಸ್ಥಿತಿ ಕಾಂಗ್ರೆಸ್ ಇದೆ. ಹಾಗಾಗಿ ಇಲ್ಲಿ ಗೆಲುವು ಸಾಧಿಸಲು ಪ್ರಿಯಾಂಕಾ ಅವರ ನೇತೃತ್ವ ಅಗತ್ಯ ಎನ್ನುವುದು ಕಾಂಗ್ರೆಸ್ ಲೆಕ್ಕಾಚಾರ.</p>.<p>ಕರ್ನಾಟಕದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರಿಗೆ ಸಂಘಟನಾ ಉಸ್ತುವಾರಿಯನ್ನು ನೀಡಲಾಗಿದೆ.ಜ್ಯೋತಿರಾದಿತ್ಯ ಸಿಂಧ್ಯಾ ಅವರಿಗೆ ಪಶ್ಚಿಮ ಉತ್ತರ ಪ್ರದೇಶದ ಉಸ್ತುವಾರಿ,ಗುಲಾಂ ನಬಿ ಆಜಾದ್ ಅವರಿಗೆ ಹರಿಯಾಣದ ಉಸ್ತುವಾರಿಯನ್ನು ನೀಡಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ವಾದ್ರಾರಾಜಕೀಯದಲ್ಲಿ ಸಕ್ರಿಯವಾಗಿದ್ದಾರೆ.ಬುಧವಾರ ಪ್ರಿಯಾಂಕಾ ಅವರನ್ನುಉತ್ತರ ಪ್ರದೇಶದ ಪೂರ್ವ ವಿಭಾಗದಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಆಗಿ ಕಾಂಗ್ರೆಸ್ ನೇಮಕ ಮಾಡಿದೆ.</p>.<p>ಫೆಬ್ರುವರಿ ಮೊದಲ ವಾರ ಪ್ರಿಯಾಂಕಾ ಅಧಿಕಾರ ಸ್ವೀಕರಿಸಲಿದ್ದಾರೆ.ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ.</p>.<p>80 ಲೋಕಸಭಾ ಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಗೆಲುವು ಸಾಧಿಸಲೇ ಬೇಕಾದ ಅನಿವಾರ್ಯ ಪರಿಸ್ಥಿತಿ ಕಾಂಗ್ರೆಸ್ ಇದೆ. ಹಾಗಾಗಿ ಇಲ್ಲಿ ಗೆಲುವು ಸಾಧಿಸಲು ಪ್ರಿಯಾಂಕಾ ಅವರ ನೇತೃತ್ವ ಅಗತ್ಯ ಎನ್ನುವುದು ಕಾಂಗ್ರೆಸ್ ಲೆಕ್ಕಾಚಾರ.</p>.<p>ಕರ್ನಾಟಕದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರಿಗೆ ಸಂಘಟನಾ ಉಸ್ತುವಾರಿಯನ್ನು ನೀಡಲಾಗಿದೆ.ಜ್ಯೋತಿರಾದಿತ್ಯ ಸಿಂಧ್ಯಾ ಅವರಿಗೆ ಪಶ್ಚಿಮ ಉತ್ತರ ಪ್ರದೇಶದ ಉಸ್ತುವಾರಿ,ಗುಲಾಂ ನಬಿ ಆಜಾದ್ ಅವರಿಗೆ ಹರಿಯಾಣದ ಉಸ್ತುವಾರಿಯನ್ನು ನೀಡಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>