<p class="title"><strong>ನವದೆಹಲಿ</strong>: ಆರ್ಎಸ್ಎಸ್ ಬೆಂಬಲಿತ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್ಎಂ) ಸಿಎಎ ಪರ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಗುಂಪೊಂದು ಪ್ರತಿಭಟನೆ ನಡೆಸಿ, ಅಡ್ಡಿಪಡಿಸಿತು.</p>.<p class="title">ಆರ್ಎಸ್ಎಸ್ ಮುಖಂಡ ಇಂದ್ರೇಶ್ ಕುಮಾರ್ ಸೇರಿದಂತೆ ಪ್ರಮುಖ ಉಪನ್ಯಾಸಕರು ವೇದಿಕೆಗೆ ಬರುತ್ತಿದ್ದಂತೆ ಮುಂದಿನ ಸಾಲಿನಲ್ಲಿ ಕುಳಿತಿದ್ದ ಪ್ರತಿಭಟನಕಾರರು ಎದ್ದುನಿಂತು ಸಿಎಎ ವಿರುದ್ಧ ಘೋಷಣೆ ಕೂಗಿದರು. ಸ್ಥಳಕ್ಕೆ ಬಂದ ಪೊಲೀಸರು ಈ ಗುಂಪನ್ನು ವಶಕ್ಕೆ ಪಡೆಯಿತು.</p>.<p class="title">ಪ್ರತಿಭಟನಕಾರರನ್ನು ಕಾಂಗ್ರೆಸ್ ಕಳುಹಿಸಿದೆ ಎಂದು ಎಂಆರ್ಎಂ ಆರೋಪಿಸಿದೆ.</p>.<p class="title">ಇಂದ್ರೇಶ್ ಕುಮಾರ್ ಮಾತನಾಡಿ, ‘ಭಾರತ ವಿಭಜನೆಯಾಗಲು ಕಾಂಗ್ರೆಸ್ ಕಾರಣ. ಇಂದಿನ ಭಾರತೀಯ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಲು ಬಯಸುವುದಿಲ್ಲ. ಆದರೆ, ಹೋಗಲು ಬಯಸುವವರು ರಾಕ್ಷಸ ಮನಸ್ಥಿತಿಯುಳ್ಳವರು’ ಎಂದು ಹೇಳಿದರು.</p>.<p class="title">‘ವಾಕ್ ಸ್ವಾತಂತ್ರ್ಯ ತಮಗಾಗಿ ಮಾತ್ರ ಇದೆ ಎಂದು ಕೆಲವರು ನಂಬಿದ್ದಾರೆ. ಸಭೆಗೆ ಚರ್ಚಿಸಲು ಬರದೇ, ಗಲಾಟೆ ಮಾಡುವ ಉದ್ದೇಶದಿಂದ ಬಂದಿದ್ದರು’ ಎಂದು ವಿಎಚ್ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಆರ್ಎಸ್ಎಸ್ ಬೆಂಬಲಿತ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್ಎಂ) ಸಿಎಎ ಪರ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಗುಂಪೊಂದು ಪ್ರತಿಭಟನೆ ನಡೆಸಿ, ಅಡ್ಡಿಪಡಿಸಿತು.</p>.<p class="title">ಆರ್ಎಸ್ಎಸ್ ಮುಖಂಡ ಇಂದ್ರೇಶ್ ಕುಮಾರ್ ಸೇರಿದಂತೆ ಪ್ರಮುಖ ಉಪನ್ಯಾಸಕರು ವೇದಿಕೆಗೆ ಬರುತ್ತಿದ್ದಂತೆ ಮುಂದಿನ ಸಾಲಿನಲ್ಲಿ ಕುಳಿತಿದ್ದ ಪ್ರತಿಭಟನಕಾರರು ಎದ್ದುನಿಂತು ಸಿಎಎ ವಿರುದ್ಧ ಘೋಷಣೆ ಕೂಗಿದರು. ಸ್ಥಳಕ್ಕೆ ಬಂದ ಪೊಲೀಸರು ಈ ಗುಂಪನ್ನು ವಶಕ್ಕೆ ಪಡೆಯಿತು.</p>.<p class="title">ಪ್ರತಿಭಟನಕಾರರನ್ನು ಕಾಂಗ್ರೆಸ್ ಕಳುಹಿಸಿದೆ ಎಂದು ಎಂಆರ್ಎಂ ಆರೋಪಿಸಿದೆ.</p>.<p class="title">ಇಂದ್ರೇಶ್ ಕುಮಾರ್ ಮಾತನಾಡಿ, ‘ಭಾರತ ವಿಭಜನೆಯಾಗಲು ಕಾಂಗ್ರೆಸ್ ಕಾರಣ. ಇಂದಿನ ಭಾರತೀಯ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಲು ಬಯಸುವುದಿಲ್ಲ. ಆದರೆ, ಹೋಗಲು ಬಯಸುವವರು ರಾಕ್ಷಸ ಮನಸ್ಥಿತಿಯುಳ್ಳವರು’ ಎಂದು ಹೇಳಿದರು.</p>.<p class="title">‘ವಾಕ್ ಸ್ವಾತಂತ್ರ್ಯ ತಮಗಾಗಿ ಮಾತ್ರ ಇದೆ ಎಂದು ಕೆಲವರು ನಂಬಿದ್ದಾರೆ. ಸಭೆಗೆ ಚರ್ಚಿಸಲು ಬರದೇ, ಗಲಾಟೆ ಮಾಡುವ ಉದ್ದೇಶದಿಂದ ಬಂದಿದ್ದರು’ ಎಂದು ವಿಎಚ್ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>