ಉದ್ಯಮಿ ನೀರವ್ ಮೋದಿ ಬಂಗಲೆ ತೆರವು

ಮುಂಬೈ: ಉದ್ಯಮಿ ನೀರವ್ ಮೋದಿ ಅವರಿಗೆ ಸೇರಿದ್ದ ಅಲಿಬಾಗ್ನ ಬಂಗಲೆಯ ತೆರವು ಕಾರ್ಯ ಆರಂಭವಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ, ಬಾಂಬೆ ಹೈಕೋರ್ಟ್ಗೆ ಶುಕ್ರವಾರ ಮಾಹಿತಿ ನೀಡಿದೆ.
ರಾಯಗಡ ಜಿಲ್ಲೆಯ ಅಲಿಬಾಗ್ನಲ್ಲಿರುವ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು. ತೆರವು ಸಂಬಂಧ ಜಿಲ್ಲಾಧಿಕಾರಿ ಕ್ರಮ ಕೈಗೊಂಡಿರುವ ಕ್ರಮದ ಬಗ್ಗೆ ಸರ್ಕಾರದ ಪರ ಹಾಜರಾಗಿದ್ದ ಪಿ.ಪಿ. ಕಾಕಡೆ ಅವರು ಮುಖ್ಯ ನ್ಯಾಯಮೂರ್ತಿ ಎನ್.ಎಚ್.ಪಾಟೀಲ್ ಅವರನ್ನು ಒಳಗೊಂಡ ಪೀಠಕ್ಕೆ ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.