ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ನಡೆದಿದ್ದು, ಚೆನ್ನೈನ ಚೆಪಾಕ್ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಮರು ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.
ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆಕರೆ ನೀಡಿದ್ದು, ವಿಧಾನಸಭೆ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ ಕಚೇರಿಗೆ ಮುತ್ತಿಗೆ ಹಾಕುವ ಭಾಗವಾಗಿ ಇಲ್ಲಿ ಜಮಾಯಿಸಿದ್ದರು.
ಈ ವಿವಾದಾತ್ಮಕ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯು ನಿರ್ಣಯ ಕೈಗೊಳ್ಳಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.