ಈ ವೇಳೆ ಘೋಷಣೆ ಕೂಗುತ್ತ ಸ್ಪೀಕರ್ ಎದುರಿನ ಜಾಗಕ್ಕೆ ನುಗ್ಗಿದ ಕಾಂಗ್ರೆಸ್ ಸದಸ್ಯರನ್ನು ಸಮಾಧಾನಪಡಿಸಿದ ಸ್ಪೀಕರ್ ಓಂ ಬಿರ್ಲಾ, ಮಾತನಾಡಲು ಅವಕಾಶ ನೀಡುವುದಾಗಿ ತಿಳಿಸಿದರು. ನಂತರ ಮಾತನಾಡಿದ ಕಾಂಗ್ರೆಸ್ ಗುಂಪಿನ ನಾಯಕ ಅಧೀರ್ ರಂಜನ್ ಚೌಧರಿ, ಬಿಜೆಪಿ ‘ಬೇಟೆಯ ರಾಜಕಾರಣ’ ಮಾಡುತ್ತಿದೆ. ಪ್ರಜಾಪ್ರಭುತ್ವ ಸಂಹರಿಸುವ ಈ ಪ್ರಕ್ರಿಯೆಗೆ ತಡೆ ನೀಡಬೇಕಿದೆ ಎಂದರು.