ಉಗ್ರರ ದಾಳಿ ಘಟನೆ ಬಳಿಕ ನಿನ್ನೆಯಷ್ಟೇ ರಾಜನಾಥ ಸಿಂಗ್ ಅವರು ಶ್ರೀನಗರಕ್ಕೆ ಭೇಟಿ ನೀಡಿ, ಹುತಾತ್ಮ ಯೋಧರಿಗೆ ನಮನ ಸಲ್ಲಿಸಿ, ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟಿದ್ದರು. ಅಧಿಕಾರಿಗಳಿಂದ ಪರಿಸ್ಥಿತಿಯ ಮಾಹಿತಿ ಪಡೆದಿದ್ದರು. ಬಳಿಕ, ಆಸ್ಪತ್ರೆಗೆ ತೆರಳಿ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯೋಧರ ಯೋಗಕ್ಷೇಮನ್ನು ವಿಚಾರಿಸಿದ್ದರು.