ವಿರೋಧ ಪಕ್ಷಗಳು ಸಹ ವಾಯು ದಾಳಿಗೆ ಬೆಂಬಲ ವ್ಯಕ್ತಪಡಿಸಿ ದೇಶದ ಸೇನಾ ಸಾಮರ್ಥ್ಯವನ್ನು ಕೊಂಡಾಡಿದ್ದರೂ ಬಿಜೆಪಿಗೆ ರಾಜಕೀಯ ಲಾಭವಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿವೆ. ಹೀಗಾಗಿಯೇ ಈ ಬಾರಿ ವಿಭಿನ್ನ ನಿಲುವು ವ್ಯಕ್ತಪಡಿಸಿವೆ. ಮೊದಲ ಬಾರಿ ಉರಿಯಲ್ಲಿ ನಿರ್ದಿಷ್ಟ ದಾಳಿ ನಡೆಸಿದಾಗ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಹಲವು ಪ್ರಶ್ನೆಗಳನ್ನು ಕೇಳಿದ್ದವು. ಈ ಬಾರಿ ಎಚ್ಚರಿಕೆ ಹೆಜ್ಜೆ ಇಟ್ಟಿರುವ ವಿರೋಧ ಪಕ್ಷಗಳು ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿ, ಪರ್ಯಾಯ ಸೂತ್ರಗಳ ಬಗ್ಗೆ ಯೋಚಿಸುತ್ತಿವೆ.